Breaking News

ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.

Spread the love

ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.

ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್‍ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ.

ಆದ್ದರಿಂದ ಮೆಜೆಸ್ಟಿಕ್‍ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು ವಿಹಾರಿಸುಷ್ಟೂ ಮೆಜೆಸ್ಟಿಕ್‍ನಲ್ಲಿ ಪ್ರಶಾಂತತೆ ಇದೆ. ಈ ಮೂಲಕ ಜನರ ಬದಲಿಗೆ ಪಾರಿವಾಳಗಳು ರಸ್ತೆಗಿಳಿದಿವೆ. ವಿರಳ ಸಂಖ್ಯೆಯಲ್ಲಿ ಆಟೋ ಮತ್ತು ಬೈಕ್ ಮೆಜೆಸ್ಟಿಕ್‍ನಲ್ಲಿ ಓಡಾಡುತ್ತಿವೆ.

ಮಹಾಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಬುಧವಾರ 51 ಇದ್ದ ಕೊರೊನಾ ಪ್ರಕರಣ ಗುರುವಾರ ದಿಢೀರನೇ 55ಕ್ಕೆ ಏರಿಕೆಯಾಗಿದೆ. ಕಳೆದ ಒಂದೇ ದಿನ ನಾಲ್ಕು ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿವೆ. ಇದನ್ನ ಗಮನಿಸಿದರೆ ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ಕಾಲಿಟ್ಟಿದ್ಯಾ ಎಂಬ ಅನುಮಾನ ಮೂಡಲು ಶುರುವಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ