ಬೆಂಗಳೂರು: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ರೈಲಿನಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ನಿಲ್ದಾಣದಲ್ಲಿ ನಡೆದಿದೆ.
ಮೆಜೆಸ್ಟಿಕ್ನಿಂದ ಮೈಸೂರು ಕಡೆ ತೆರಳುತ್ತಿದ್ದ ಬೆಂಗಳೂರು – ಮೈಸೂರು ಪ್ಯಾಸೆಂಜರ್ ರೈಲಿನಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿ ರಾಮನಗರದ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ತಿಳಿದುಬಂದಿದೆ.
ನಿಧಾನಕ್ಕೆ ಚಲಿಸುತ್ತಿದ್ದ ವೇಳೆ ರೈಲು ಹತ್ತಲು ವ್ಯಕ್ತಿ ಯತ್ನಿಸಿದ್ದಾನೆ. ಈ ವೇಳೆ ಕಾಲು ಜಾರಿ ರೈಲಿನ ಚಕ್ರದಡಿ ಬಿದ್ದಿದ್ದಾನೆ. ವ್ಯಕ್ತಿ ಬಿದ್ದಿರೋದನ್ನ ಗಮನಿಸಿದ ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿದ್ದಾರೆ.
Laxmi News 24×7