Breaking News
Home / ಜಿಲ್ಲೆ / ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡ ಟೋಪಿವಾಲನಿಗಾಗಿ ಮಂಗಳೂರು ಪೊಲೀಸರು ವ್ಯಾಪಕ ಶೋಧ

ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡ ಟೋಪಿವಾಲನಿಗಾಗಿ ಮಂಗಳೂರು ಪೊಲೀಸರು ವ್ಯಾಪಕ ಶೋಧ

Spread the love

ಬೆಂಗಳೂರು,ಜ.21-ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿರುವ ಟೋಪಿವಾಲನಿಗಾಗಿ ಮಂಗಳೂರು ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಡಾ.ಹರ್ಷ ಅವರು ಆರೋಪಿಯ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ತಂಡಗಳು ನಿನ್ನೆಯಿಂದಲೇ ಆರೋಪಿಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿವೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ನಂತರ ಮಂಗಳೂರು ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಬಿಳಿ ಶರ್ಟ್ , ಕಪ್ಪು ಬಣ್ಣದ ಪ್ಯಾಂಟ್ ತೊಟ್ಟು ಮುಖ ಕಾಣದ ಹಾಗೆ ಟೋಪಿಯನ್ನು ಧರಿಸಿ ಲ್ಯಾಪ್‍ಟಾಪ್‍ಗೆ ಬಳಸುವ ಬ್ಯಾಗ್‍ನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ.  ತಕ್ಷಣ ತೀವ್ರವಾಗಿ ಪರಿಶೀಲಿಸಿದ ಪೊಲೀಸರಿಗೆ ಆತ ಆಟೋದಲ್ಲಿ ಬಂದು ವಿಮಾನ ನಿಲ್ದಾಣಕ್ಕೆ ಹೋಗಿ ಟಿಕೆಟ್ ಕೌಂಟರ್ ಬಳಿಯ ಸಾರ್ವಜನಿಕರು ಕುಳಿತುಕೊಳ್ಳುವ ಕಬ್ಬಿಣದ ಚೇರ್ ಮೇಲಿಟ್ಟು ಪರಾರಿಯಾಗಿರುವುದು ಗೊತ್ತಾಗಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ