ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ ನಡೆದಿದೆ.
ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ ಸಾರ್ವಜನಿಕ ಶ್ರೀಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ ಹುಂಡಿಯಲ್ಲಿ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ ಹುಂಡಿಯ ಹಣ ಎಣಿಕೆ ಕಾರ್ಯ ನಡೆಯುತ್ತದೆ. ಈ ಬಾರಿ ಮಾತ್ರ ತಡವಾಗಿ ಕಾಣಿಕೆಹುಂಡಿಯನ್ನು ಎಣಿಕೆಗೆ ತೆಗೆಯಲಾಗಿದೆ.
ಎಣಿಕೆಯ ವೇಳೆ ಕಾಂಡೋಮ್ಗಳು ಹಾಗೂ ಸಿಎಂ ಬಿಬಿಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಭಾವ ಚಿತ್ರಗಳನ್ನು ವಿರೋಪಗೊಳಿಸಿ,ಅವಹೇಳನಕಾರಿ ಬರಹಗಳನ್ನು ಬರೆದು ಕಾಣಿಕೆ ಹುಂಡಿಗೆ ಹಾಕಿದ್ದಾರೆ. ಬಳಕೆ ಮಾಡಿದ ಎರಡು ಕಾಂಡೋಮ್ ಹಾಕಿದ್ದ ಕಿಡಿಗೇಡಿಗಳು ಅದರ ಜೊತೆಗೆ ಬೆಂಗಳೂರಿನ ಕೆ.ಆರ್. ಐಡಿಯಲ್ ನಿಗಮಾಧ್ಯಕ್ಷರಾದ ಎಂ ರುದ್ರೇಶ್ ಅವರಿಗೆ ಶುಭಕೋರಿದ ಒಂದು ಪೋಸ್ಟರ್ ಹಾಕಿದ್ದಾರೆ. ಪೋಸ್ಟರ್ನಲ್ಲಿರುವ ಸಿಎಂ ಬಿಎಸ್ವೈ, ಅವರ ಪುತ್ರ ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಅನೇಕ ಬಿಜೆಪಿ ನಾಯಕರ ಫೋಟೋವನ್ನು ವಿರೂಪಗೊಳಿಸಲಾಗಿದೆ.
Laxmi News 24×7