Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

Spread the love

ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ.

ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ‌ ಸಾರ್ವಜನಿಕ‌ ಶ್ರೀ‌ಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ‌ ಹುಂಡಿಯಲ್ಲಿ‌ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ‌ ಹುಂಡಿಯ ಹಣ ಎಣಿಕೆ ಕಾರ್ಯ ನಡೆಯುತ್ತದೆ. ಈ ಬಾರಿ ಮಾತ್ರ ತಡವಾಗಿ ಕಾಣಿಕೆ‌ಹುಂಡಿಯನ್ನು ಎಣಿಕೆಗೆ ತೆಗೆಯಲಾಗಿದೆ.

ಎಣಿಕೆಯ ವೇಳೆ ಕಾಂಡೋಮ್‌ಗಳು ಹಾಗೂ ಸಿಎಂ ಬಿಬಿಸ್ ಯಡಿಯೂರಪ್ಪ‌ ಸೇರಿದಂತೆ ಬಿಜೆಪಿ ನಾಯಕರ ಭಾವ ಚಿತ್ರಗಳನ್ನು ವಿರೋಪಗೊಳಿಸಿ,ಅವಹೇಳನಕಾರಿ ಬರಹಗಳನ್ನು ಬರೆದು ಕಾಣಿಕೆ‌ ಹುಂಡಿಗೆ ಹಾಕಿದ್ದಾರೆ. ಬಳಕೆ ಮಾಡಿದ ಎರಡು ಕಾಂಡೋಮ್‌ ಹಾಕಿದ್ದ ಕಿಡಿಗೇಡಿಗಳು ಅದರ ಜೊತೆಗೆ ಬೆಂಗಳೂರಿನ ಕೆ.ಆರ್‌. ಐಡಿಯಲ್‌ ನಿಗಮಾಧ್ಯಕ್ಷರಾದ ಎಂ ರುದ್ರೇಶ್‌ ಅವರಿಗೆ ಶುಭಕೋರಿದ ಒಂದು ಪೋಸ್ಟರ್ ಹಾಕಿದ್ದಾರೆ. ಪೋಸ್ಟರ್‌ನಲ್ಲಿರುವ ಸಿಎಂ ಬಿಎಸ್‌ವೈ, ಅವರ ಪುತ್ರ ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಫೋಟೋವನ್ನು ವಿರೂಪಗೊಳಿಸಲಾಗಿದೆ.


Spread the love

About Laxminews 24x7

Check Also

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Spread the loveಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ