Home / ಜಿಲ್ಲೆ / ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್

ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್

Spread the love

ಮಂಗಳೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್ ಆಗಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

ಇಟಲಿಯಲ್ಲಿ ವಾಸವಾಗಿದ್ದ ಮಂಗಳೂರಿನ ಮೂಲದ ಶ್ರೀಮಧು ಇಟಲಿಯಿಂದ ಮಾ.22ರಂದು ಕೊನೆ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮೊನ್ನೆ ರಾತ್ರಿ ದೆಹಲಿಯ ವಿಶೇಷ ಬಸ್ ಮೂಲಕ ಶ್ರೀಮಧು ಬೆಂಗಳೂರು ತಲುಪಿದ್ದಳು.

ಬೆಂಗಳೂರು ತಲುಪಿದ ಶ್ರೀಮಧುಗೆ ಮಂಗಳೂರಿಗೆ ಬರಲು ಬಸ್ ಅಥವಾ ಯಾವುದೇ ವ್ಯವಸ್ಥೆ ಇರಲಿಲ್ಲ. ಮುಂದೇನು ಅಂತ ದಿಕ್ಕು ತೋಚದಂತಾಗಿದ್ದಳು. ನಂತರ ಮಾಜಿ ಸಚಿವ ಯು.ಟಿ ಖಾದರ್ ಅವರಿಗೆ ಮಾಹಿತಿ ನೀಡಿದ್ದು, ಯುವತಿಯ ಕಷ್ಟಕ್ಕೆ ಧಾವಿಸಿ ತನ್ನ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಕರೆ ತಂದು ಶ್ರೀಮಧು ಅವರ ಕುಳಾಯಿಯಲ್ಲಿ ಇರುವ ಮನೆಗೆ ಬಿಟ್ಟಿದ್ದಾರೆ. ಖಾದರ್ ಅವರ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ