ಮಣಿಪಾಲ
ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಚಿಂತನೆಯಿದ್ದು, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು. ಇಲಾಖೆಯಲ್ಲಿನ ಸಿಬ್ಬಂದಿಗಳ ಕುಂದುಕೊರತೆ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆಂದರು.
ಈ ಸಭೆಯಲ್ಲಿ ಶಾಸಕರಾದ ಶ್ರೀ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ಆಹಾರ ಇಲಾಖೆ ಉಪ ನಿರ್ದೇಶಕ ಕುಸುಮಾಧರ್ ಉಪಸ್ಥಿತರಿದ್ದರು.