ಸೇವಾ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ

Spread the love

ಬೈಲಹೊಂಗಲ ಮತಕ್ಷೇತ್ರದ ಮರಕುಂಬಿ ಗ್ರಾಮದಲ್ಲಿ ಜರುಗುತ್ತಿರುವ ಸುಕ್ಷೇತ್ರ ಅಂಕಲಗಿ ಶ್ರೀ ಅಡವಿಸಿದ್ಧೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಭವ್ಯ ಜಾನುವಾರು ಜಾತ್ರೆಯ ಅಂಗವಾಗಿ, ಕಾರ್ತಿಕ ಪಾಟೀಲ ಸೇವಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಇಂದು ಪಾಲ್ಗೊಳ್ಳಲಾಯಿತು.

​ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ವಿವಿಧ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಮಂಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಮಾಜದಲ್ಲಿ ಸರಳತೆ ಮತ್ತು ಸಾಮರಸ್ಯವನ್ನು ಬಿತ್ತರಿಸುವ ಇಂತಹ ಕಾರ್ಯಕ್ರಮಗಳು ಮಾದರಿಯಾಗಿವೆ. ಈ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಲ್ಲಾ ನೂತನ ವಧು-ವರರಿಗೆ ಸುಖಿ ಜೀವನದ ಶುಭ ಹಾರೈಕೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಶ್ರೀ ಅಮೃತ ದೆಸಾಯಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚನ್ನಮ್ಮ ಸಮಾಧಿ ಉದ್ಘಾಟನೆ ವಿವಾದ: ಮಾ.9ರಂದು ಬೈಲಹೊಂಗಲ ಬಂದ್

Spread the loveಬೈಲಹೊಂಗಲ: ‘ವೀರರಾಣಿ ಕಿತ್ತೂರು ಚನ್ನಮ್ಮ ನವಿಕೃತ ಸಮಾಧಿ ಸ್ಥಳ ಹಾಗೂ ಉದ್ಯಾನವನ್ನು ಯಾರಿಗೂ ತಿಳಿಸದೆ ತರಾತುರಿಯಲ್ಲಿ ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ