Breaking News

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

Spread the love

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ ಎಲ್ಲರಿಗೂ ಶುಭದಿನ ರಾಹುಕಾಲ ಶುರು ಆಗುವ ಮೊದಲೇ ಬಿಜೆಪಿ,ಕಾಂಗ್ರೆಸ್,ಮತ್ತು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಗಾವಿಯಲ್ಲಿ ಬಹುತೇಕ ಬೆಳಗಾವಿ ಜಿಲ್ಲೆಯ ಪಕ್ಕಾ ಮತದಾರರನ್ನು ಕರೆತರಲು ಮೂವರು ಅಭ್ಯರ್ಥಿಗಳು ತಯಾರಿ ನಡೆಸಿದ್ದು. ಅವರು ಗಟ್ಟಿಯಾಗಿ ಯಾರ ಪರವಾಗಿ ನಿಲ್ತಾರೆ ಅನ್ಮೋದು ಎಲ್ಲರಲ್ಲಿ ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ

Spread the love ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ ಇತ್ತೀಚೆಗೆ ಗೋವಾ ಫೊಂಡಾದಲ್ಲಿರುವ ಸಡಾ ಅಂತರರಾಷ್ಟ್ರೀಯ ಈಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ