ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್.
ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News