Breaking News

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಬಹುದು: ಆರ್‌ಬಿಐ ಗವರ್ನರ್

Spread the love

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್  ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್‌ಬಿಐ ಗವರ್ನರ್  ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ. ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ದೇಶದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ ಎಂದು ಮಲ್ಹೋತ್ರಾ ಹೇಳಿದರು.

ಈ ಪರಿಸ್ಥಿತಿ ಇನ್ನೂ ಮುಂದುವರಿದರೆ ಸರ್ಕಾರ ಇಂಧನ ಬೆಲೆ ಏರಿಕೆಯ ಭಾರವನ್ನು ಸಾರ್ವಜನಿಕರ ಮೇಲೆ ಹಾಕಬೇಕಾದ ಪರಿಸ್ಥಿತಿ ಬರಬಹುದು ಎಂದು ಅವರು ಎಚ್ಚರಿಕೆ ನೀಡಿದರು. ಆದರೆ ಫೆಬ್ರವರಿ 28ರಿಂದ ಆರಂಭವಾದ ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸಿಲ್ಲ.

ಇದೇ ವೇಳೆ ವಿದೇಶಿ ವಿನಿಮಯ ಉಳಿಸಲು ಇಂಧನ ಬಳಕೆ ಮತ್ತು ಖಾದ್ಯ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ನಡುವೆ ರೂಪಾಯಿ ಮೌಲ್ಯವೂ ಕುಸಿತ ಕಂಡಿದ್ದು, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 95ರ ಗಡಿಗಿಂತ ಕೆಳಗೆ ಇಳಿದಿದೆ.


Spread the love

About Laxminews 24x7

Check Also

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್ – ಬಸ್‌ಪಾಸ್ ಶುಲ್ಕ ಮರುಪಾವತಿ; ಜೂ.29 ರಿಂದ ಅರ್ಜಿ ಪ್ರಕ್ರಿಯೆ ಶುರು

Spread the loveವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ