Breaking News

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ರಾಜ್ಯಪಾಲರಿಗೆ ಸಚಿವ ಸಂತೋಷ್‌ ಲಾಡ್‌ ಮನವಿ

Spread the love

ಬೆಂಗಳೂರು,  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಮನವಿ ಮಾಡಿದ್ದಾರೆ.

ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಲೋಕಭವನದಲ್ಲಿ ಇಂದು ಭೇಟಿ ಮಾಡಿ ಸಚಿವರು ಮನವಿ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಲಾಡ್‌ ಅವರು, ಪ್ರತ್ಯೇಕ ಧಾರವಾಡ ಪಾಲಿಕೆ ಆಗಬೇಕು ಎಂದು ಹಲವು ವರ್ಷಗಳ ಬೇಡಿಕೆ ಇತ್ತು. ಹೋರಾಟವೂ ನಡೆದಿತ್ತು. ನಮ್ಮ ಸರ್ಕಾರ ಬಂದ ನಂತರ ಪ್ರತ್ಯೇಕ ಪಾಲಿಕೆ ಬೇಡಿಕೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳಿಸಲಾಗಿತ್ತು. ಒಂದು ವರ್ಷದಿಂದ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದೀಗ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯವರು ಒತ್ತಡ ಹಾಕಲು ಆರಂಭಿಸಿದರು. ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.ಆದಷ್ಟು ಬೇಗ ಧಾರವಾಡ ಪಾಲಿಕೆ ರಚನೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲೆಯ ಜನತೆಯ ಪರವಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಶಾಸಕರಾದ ಶ್ರೀ ಪ್ರಸಾದ್‌ ಅಬ್ಬಯ್ಯ, ಶ್ರೀ ಎನ್‌ ಎಚ್‌ ಕೋನರಡ್ಡಿ, ಹೋರಾಟ ಸಮಿತಿ ಮುಖಂಡರಾದ ಶ್ರೀ ಬಿ ಡಿ ಹಿರೇಮಠ್, ಹೂಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ರೀ ನಾಗರಾಜ್ ಗೌರಿ, ಪಾಲಿಕೆ ಸದಸ್ಯ ಶ್ರೀ ಮಯೂರ್‌ ಮೋರೆ, ಗುರುರಾಜ್‌ ಹುಣಸೀಮರದ ಮತ್ತಿತರರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Spread the loveನವದೆಹಲಿ: ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ