Breaking News

ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆ

Spread the love

ಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು.

ನಗರದ ಹಿಲ್‌ ಗಾರ್ಡನ್‌ ನಲ್ಲಿ ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ರಿವಾರ್ಡ್ ಮತ್ತು ಆತ್ಮ ಯೋಜನೆಗಳ ಅಡಿಯಲ್ಲಿ ಹಮ್ಮಿಕೊಳ್ಳಲಾದ ಎಲ್‌ಆರ್‌ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್‌ಆರ್‌ಐ ಯಾತ್ರೆ ಹಾಗೂ ಖೇತ್ ಬಚಾವೋ ಅಭಿಯಾನದ ಮೂಲಕ ರೈತರಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಮಳೆನೀರಿನ ಸಂರಕ್ಷಣೆ, ಭೂ ಕುಸಿತ ತಡೆ, ಜಲಾನಯನ ಅಭಿವೃದ್ಧಿ ಮತ್ತು ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮಗಳು ರೈತರ ಆದಾಯ ಹೆಚ್ಚಳಕ್ಕೆ ಹಾಗೂ ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಸಹಕಾರಿಯಾಗಲಿವೆ ಎಂದು ತಿಳಿಸಿದರು.

ರಿವಾರ್ಡ್ ಮತ್ತು ಆತ್ಮ ಯೋಜನೆಗಳಡಿ ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ತರಬೇತಿ ಶಿಬಿರಗಳು ಹಾಗೂ ಕ್ಷೇತ್ರ ಪ್ರದರ್ಶನಗಳನ್ನು ಆಯೋಜಿಸಿ ರೈತರಿಗೆ ಅಗತ್ಯ ಮಾಹಿತಿ ಮತ್ತು ತಾಂತ್ರಿಕ ಮಾರ್ಗದರ್ಶನ ಒದಗಿಸಲಾಗುವುದು ಎಂದು ಇದೇ ವೇಳೆ ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.

ಎಲ್‌ಆರ್‌ಐ ಯಾತ್ರೆ ಹಾಗೂ “ಖೇತ್ ಬಚಾವೋ” ಅಭಿಯಾನದ ಅಂಗವಾಗಿ ಜಾಗೃತಿ ವಾಹನಕ್ಕೆ ಸಚಿವರು ಹಸಿರು ನಿಶಾನೆ ತೋರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಖ್ಯಾತ ವೈದ್ಯ ಡಾ. ಗಿರೀಶ್‌ ಸೋನವಾಲಕರ್‌, ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ. ಕೊಳೇಕರ್‌, ಬೆಳಗಾವಿ ಉಪ ಕೃಷಿ ನಿರ್ದೇಶಕ ಎನ್. ಎ. ಸಲೀಂ, ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಗೋಕಾಕ ಸಹಾಯಕ ಕೇಷಿ ನಿರ್ದೇಶಕ ಎಮ್ೆನ್.‌ ನದಾಫ್‌, ಬೆಳಗಾವಿ ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಅಂಗಡಿ, ಸೇರಿದಂತೆ ಕೃಷಿ ಮತ್ತು ಜಲಾನಯನ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ