Breaking News

ಸರ್ಕಾರಿ ಕಾಲೇಜಿನಲ್ಲಿ ಅನುದಾನ ದುರ್ಬಳಕೆ: ವಿದ್ಯಾರ್ಥಿಗಳ ಪ್ರತಿಭಟನೆ

Spread the love

ಕಿತ್ತೂರು: ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸರ್ಕಾರದಿಂದ ಬರುವ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೆಲ ಬೋಧಕರು ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪ್ರಾಂಶುಪಾಲರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನಾ ನಡೆದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಶೀಘ್ರ ಸಿಡಿಪಿ ಸಭೆ ಕರೆದು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಹಸೀಲ್ದಾರ್ ಕಲಗೌಡ ಪಾಟೀಲ, ಸಿಪಿಐ  ಶಿವಾನಂದ ಗುಡುಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೋಳ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎ್.ಜಕಾತಿ, ಮಂಜುನಾಥ ದೊಡ್ಡಣ್ಣನವರ, ಅಷ್ಪಾಕ್ ಹವಾಲ್ದಾರ್, ಸುರೇಶ ಕಿತ್ತೂರ, ಆಕಾಶ ದಡ್ಡಿ, ರೆಹಮತ್‌ಉಲ್ಲಾ ಹೊನ್ನಾಪುರ ಇದ್ದರು.

Spread the love

About Laxminews 24x7

Check Also

ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!

Spread the love ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ