ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಿದ್ದಾರೆ.
ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು. ಕಳೆದ ಎರಡು ದಿನಗಳಿಂದ ಎದೆನೋವು ಕಾಣಿಸಿಕೊಂಡಿದ್ದರಿಂದ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ದಾರೆ.
ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, ಆಂಜಿಯೋಗ್ರಾಂ ವೇಳೆ ರಕ್ತನಾಳಗಳಲ್ಲಿ ಬ್ಲಾಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುಂದಿನ ಹಂತದಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿದ್ದಾರೆ.
Laxmi News 24×7