Breaking News

ಸತ್ತಿಗೇರಿ ಗ್ರಾಮದಲ್ಲಿ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ

Spread the love

ಸತ್ತಿಗೇರಿ: ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವುದು ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ 30 ಲಕ್ಷ ರೂ. ವೆಚ್ಚದಲ್ಲಿ ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣದಿಂದ ಸತ್ತಿಗೇರಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯತೆ ಸಂಪೂರ್ಣ ಈಡೇರಲಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.
ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಮಲಿಕಸಾಬ್ ಬಾಗವಾನ, ಬಂಗಾರೆಪ್ಪ ಹುರಳಿ, ಸುರೇಶ ಭಜಂತ್ರಿ, ಬಸವರಾಜ ಸತ್ತೂರಿ, ಯಂಕಣ್ಣ ಕಳ್ಳಿಗುದ್ದಿ, ಪಿಡಿಒ ಎ.ಬಿ.ಬಂಗಾರಿ, ಗೋಪಾಲ ದಳವಾಯಿ, ಉಮೇಶ ಮಾಗುಂಡನ್ನವರ, ಸಿದ್ದಪ್ಪ ರಂಗರಣ್ಣವರ, ಬನಪ್ಪಗೌಡ ಪಾಟೀಲ, ಮುಗಬಸೀರ್ ಬಾಗವಾನ, ಜಯವಂತ ಹಾದಿಮನಿ, ರುದ್ರಪ್ಪ ತುಮಂದಿ, ನಾಗಪ್ಪ ತುರಮಂದಿ, ಶಿವಪ್ಪ ದೇಸಾಯಿ, ಬಸವರಾಜ ಅಯ್ಯನಗೌಡ್ರ, ಪ್ರೇಮ ರಾಠೋಡ ಇತರರಿದ್ದರು.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ