Breaking News

ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

Spread the love

ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ.

ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ ದುರಸ್ಥಿ ಸೇರಿದಂತೆ ವಿವಿಧ ಕಾಮಗಾರಿಗಳು, ಅರಮನೆಯಲ್ಲಿರುವ ತೂಗು ದೀಪಗಳು , ಖಾಸಾಗಿ ದರ್ಬಾರ್ ಹಾಗೂ ಕಲ್ಯಾಣ ಮಂಟಪದಲ್ಲಿನ ಅಲಂಕಾರಿಕ ವಿದ್ಯೂತ್ ದೀಪಗಳ ದುರಸ್ತಿ ನಡೆಸಲಾಗುತ್ತಿದೆ.

ಹಾಗೆಯೇ ಅರಮನೆ ಸುತ್ತಮುತ್ತ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ