Breaking News

ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ……..

Spread the love

ಮಂಡ್ಯ: ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ.

ಆಶಾ ಕಾರ್ಯಕರ್ತೆ ಕೆ.ವೈ ಶೋಭಾ ಅವರ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಅದೇ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.

ಹಲ್ಲೆ ಆರೋಪ ಎದುರಿಸುತ್ತಿರುವ ನಾಲ್ವರು ಕ್ವಾರಂಟೈನ್ ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಶೋಭಾ ತಿಳುವಳಿಕೆ ನೀಡಲು ಹೋಗಿದ್ದಾರೆ. ಅಷ್ಟಕ್ಕೆ ಕೋಪಗೊಂಡ ನಾಲ್ವರು ನಿನ್ನದು ಅತಿಯಾಯ್ತು. ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದೀಯಾ, ಮಾನಸಿಕ ಹಿಂಸೆ, ಕಿರುಕುಳ ನೀಡ್ತಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದಲ್ಲದೇ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾದ ಶೋಭಾಗೆ ಕೆ.ಆರ್ ಪೇಟೆ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕೆ.ಆರ್ ಪೇಟೆ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.

Spread the loveಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ