Breaking News
Home / ಜಿಲ್ಲೆ / ದಕ್ಷಿಣ ಕನ್ನಡ / ಕುಂಬಾರರಿಗೂ ವಿಶೇಷ ಪರಿಹಾರ ನೆರವು ನೀಡಲು ಸಿಎಂಗೆ ಮನವಿ…………

ಕುಂಬಾರರಿಗೂ ವಿಶೇಷ ಪರಿಹಾರ ನೆರವು ನೀಡಲು ಸಿಎಂಗೆ ಮನವಿ…………

Spread the love

ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾದ ಕುಂಬಾರಿಕೆ ವೃತ್ತಿ ಮಾಡುವವರಿಗೂ ಐದು ಸಾವಿರ ರೂಪಾಯಿಗಳ ವಿಶೇಷ ಪರಿಹಾರ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಕುಲಾಲ್ ಕುಂಬಾರ ಯುವವೇದಿಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಇರುವವರ ನೆರವಿಗೆ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಪರಿಹಾರ ಘೋಷಿಸುವ ಮೂಲಕ ಹೆಚ್ಚಿನ ನೆರವು ನೀಡಿರುವ ತಮ್ಮ ನಡೆ ಸ್ವಾಗತಾರ್ಹ. ಆದರೆ ರಾಜ್ಯಾದ್ಯಂತ ಸಂಕಷ್ಟಕ್ಕೆ ಸಿಲುಕಿರುವ ಇನ್ನೂ ಹಲವು ಶ್ರಮಿಕ ಸಮುದಾಯಗಳಿವೆ. ಅದರಲ್ಲಿ ಕುಂಬಾರರು ಇದ್ದಾರೆ. ರಾಜ್ಯದ 40ರಿಂದ 50 ಸಾವಿರ ಕುಂಬಾರ ಕುಟುಂಬಗಳು ತಮ್ಮ ಕುಂಬಾರಿಕೆ ವೃತ್ತಿ ಮುಂದುವರಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ವಿಶೇಷವಾಗಿ ಬೇಸಿಗೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿನ ಬೇಡಿಕೆ ಇರುತ್ತಿತ್ತು. ಆದರೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಡಿಕೆಗಳ ಮಾರಾಟ ಸ್ಥಗಿತಗೊಂಡಿದೆ ಎಂದು ಸಿಎಂಗೆ ಮನವಿ ಮಾಡಲಾಗಿದೆ.

ಬೇಸಿಗೆ ಕಾಲದ ಮಡಿಕೆ ವ್ಯಾಪಾರಕ್ಕಾಗಿ ಮುಂಚಿತವಾಗಿ ಸಿದ್ಧಪಡಿಸಿದ ಮಡಿಕೆಗಳು ಮೂಲೆಯಲ್ಲಿ ಸಂಗ್ರಹಿಸಿದ ಕಾರಣ ಅಲ್ಲಿಯೇ ಒಡೆದು ಹೋಗುತ್ತಿವೆ. ಮಡಿಕೆ ಮಾರಾಟವೇ ಜೀವನ ನಿರ್ವಹಣೆಗೆ ಆಸರೆಯಾಗಿರುವ ಕುಂಬಾರರ ಬದುಕಿಗೆ ಕೊರೊನಾ ರೋಗ ಕೊಳ್ಳಿ ಹೊಡೆದಿದೆ. ಕಳೆದ 40 ದಿನಗಳಿಂದ ಕೆಲಸ ಇಲ್ಲದೇ ಮನೆಯಲ್ಲಿರುವ ಕಸುಬುದಾರರು ಸರ್ಕಾರದ ಆರ್ಥಿಕ ನೆರವಿಗಾಗಿ ಕಾಯುತ್ತಿದ್ದಾರೆ. ಇಂತಹ ದುರಿತ ಕಾಲದಲ್ಲಿ ಕುಂಬಾರಿಕೆ ಕಸುಬುದಾರರಿಗೂ ಐದು ಸಾವಿರ ರೂಪಾಯಿಗಳ ವಿಶೇಷ ಪರಿಹಾರ ನೆರವು ನೀಡಬೇಕು ಎಂದು ಕರ್ನಾಟಕ ರಾಜ್ಯ ಕುಲಾಲ್ ಕುಂಬಾರ ಯುವವೇದಿಕೆ ಹಾಗೂ ಕುಲಾಲ್ ಮಹಿಳಾ ಸಂಘಟನೆಗಳ ವತಿಯಿಂದ ಸಿಎಂಗೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

Spread the loveಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ