Breaking News

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

Spread the love

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ.

ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ ಸ್ನಾನಕ್ಕೆ ತಾತ್ಕಾಲಿಕ ಕೆರೆ ನಿರ್ಮಿಸಲಾಗಿದ್ದು, ಇದರಲ್ಲಿ ಬೇಸಿಗೆಯ ಈ ಸಮಯದಲ್ಲೂ ಕೇವಲ 8 ಅಡಿಗೆ ಬಹಳಷ್ಟು ನೀರು ಸಿಕ್ಕಿದ್ದು ಭಕ್ತರಿಗೆ ಅಚ್ಚರಿ  ಮೂಡಿಸಿದೆ.

ಹಿಟಾಚಿಯಲ್ಲಿ ಸಂಜೆ ವೇಳೆ ಕೆರೆ ತೊಡಲು ಆರಂಭಿಸಿ ರಾತ್ರಿ ಪೂಜೆಗೂ ಮನ್ನವೇ ನೀರು ಸಿಕ್ಕಿದ್ದು ಕುತೂಹಲಕ್ಕೂ ಕಾರಣವಾಗಿದೆ. ನೂರಾರು ಅಡಿ ಬೋರ್ ವೆಲ್ ಕೊರೆಸಿದರೂ ನೀರು ಸಿಗದ ಈ ಬಿರು ಬೇಸಿಗೆಯಲ್ಲಿ 8 ಅಡಿಯಲ್ಲೇ ಭರಪೂರ ನೀರು ಸಿಕ್ಕಿದ್ದನ್ನು ಕಂಡ ಭಕ್ತರು ಇದು ದೇವರ ಪವಾಡ ಎನ್ನುತ್ತಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ