Breaking News
Home / ಜಿಲ್ಲೆ / ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

Spread the love

ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. ಆದರೆ ಬೆಳೆ ಕಟಾವಿಗೆ ಬರುವ ಹೊತ್ತಿನಲ್ಲಿ ಲಾಕ್‍ಡೌನ್ ಆದ ಕಾರಣ ಸುಮಾರು 300 ಟನ್ ಅನಾನಸ್ ಬೆಳೆ ಜಮೀನಿನಲ್ಲೇ ಉಳಿಯುವಂತಾಗಿದೆ.

ಎರ್ನಾಕುಲಂ ಮೂಲದ ಕೃಷಿಕ ಶೈಜು, ಅನಾನಸ್ ಬೆಳೆಯುವ ಉದ್ದೇಶದಿಂದ ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂ. ಸಾಲ ಮಾಡಿ ಅನಾನಸ್ ಕೃಷಿ ಮಾಡಿದ್ದರು. ಲಾಕ್‍ಡೌನ್ ಇಲ್ಲದಿದ್ದರೆ ಕೃಷಿಕ ಬೆಳೆದ ಅನಾನಸ್ ಉತ್ತರ ಭಾರತದಲ್ಲಿ ಉತ್ತಮ ಬೆಲೆಗೆ ಮಾರಾಟ ಆಗುತ್ತಿತ್ತು. ಆದರೆ ಲಾಕ್‍ಡೌನ್‍ನಿಂದ ಅನಾನಸ್ ಬೆಳೆ ಹಾಳಾಗುತ್ತಿದೆ. ಹೀಗಾಗಿ ಸರ್ಕಾರ ನೆರವಿಗೆ ಬರುವಂತೆ ಕೃಷಿಕ ಶೈಜು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ

Spread the love ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ