ಮಂಗಳೂರು: ನಗರದಲ್ಲಿರುವ ಪಂಪ್ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಮೇಲ್ಸೇತುವೆ ಎಂಬ ಬ್ಯಾನರ್ ಹಾಕಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಕೆಲ ಅಪರಿಚಿತರು ಮೇಲ್ಸೇತುವೆ ಮೇಲೆ ವೀರ್ ಸಾವರ್ಕರ್ ಹೆಸರಿನ ಬ್ಯಾನರ್ ಹಾಕಿ ಪಕ್ಕದಲ್ಲಿಯೇ ಬಜರಂಗದಳ ಎಂದು ಬರೆದು ಫೋಟೋ ಕ್ಲಿಕ್ಕಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ ಬಳಿಕ ಬ್ಯಾನರ್ ತೆಗೆದು ಹಾಕಿದ್ದಾರೆ. ಸದ್ಯ ಸ್ಥಳೀಯ ಮಟ್ಟದಲ್ಲಿ ವೀರ್ ಸಾವರ್ಕರ್ ಬ್ಯಾನರ್ ಫೋಟೋಗಳು ಮಿಂಚಿನಂತೆ ಹರಿದಾಡುತ್ತಿವೆ.
ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಡಲು ಸರ್ಕಾರ ಮುಂದಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆ ಸರ್ಕಾರ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಿದೆ.