Breaking News
Home / ಜಿಲ್ಲೆ / ದಕ್ಷಿಣ ಕನ್ನಡ / ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕೆರೆಯಂತಾದ ರಸ್ತೆ……….

ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕೆರೆಯಂತಾದ ರಸ್ತೆ……….

Spread the love

ಮಂಗಳೂರು: ಕಳೆದ ಕೆಲದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲೂ ಭಾರೀ ಮಳೆ ಸುರಿದಿದೆ.

ಎಡೆಬಿಡದೆ ಸುರಿದ ಮಳೆಯಿಂದಾಗಿ ದೇವಸ್ಥಾನದ ಬಳಿಯ ರಸ್ತೆ ಪೂರ್ತಿ ನೀರು ನಿಂತು ಕೆರೆಯಂತಾಗಿತ್ತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರವೇಶಿಸುವ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ನೀರು ಹರಿಯುವುದಕ್ಕೆ ಸಾಧ್ಯವಾಗದೇ ರಸ್ತೆ ಕೆರೆಯಂತಾಗಿತ್ತು.

ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ, ಕಾರು ಕೃತಕ ನೆರೆಗೆ ಭಾಗಶಃ ಮುಳುಗಿ ಹೋಗಿತ್ತು. ವಾಹನ ಸವಾರರು ತಮ್ಮ ವಾಹನಗಳನ್ನು ನೆರೆ ನೀರಿನಿಂದ ಹೊರತರುವುದಕ್ಕೆ ಹರಸಾಹಸ ಪಟ್ಟ ಘಟನೆಯು ನೆರಯಿತು.

ಜಿಲ್ಲೆಯಲ್ಲಿ ನಿತ್ಯ ಸಂಜೆಯ ಹೊತ್ತು ಗುಡುಗು-ಸಿಡಿಲು ಸಹಿತ ಮಳೆಯಾಗುತ್ತಿದ್ದು, ಇಳೆಯನ್ನು ತಂಪಾಗಿಸುತ್ತಿದೆ.


Spread the love

About Laxminews 24x7

Check Also

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

Spread the loveಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ