Breaking News

ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು

Spread the love

ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ.

ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಸ್ ಡಿಆರ್ ಎಫ್ ತಂಡ ಶೋಧ ಕಾರ್ಯಚರಣೆಯನ್ನು ತೀವ್ರಗೊಳಿಸಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ