Breaking News

ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್

Spread the love

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

‎ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. 

‎ಇನ್ನು ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕಡಲ ಕಡೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಕಣ್ಗಾಗವಲಿರಿಸಿದ್ದು, ಈ ಮಳೆಗಾಲದ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ. 


Spread the love

About Laxminews 24x7

Check Also

ಎಲ್ಲರೂ ಒಟ್ಟಿಗೇ ಹೋಗೋಣ, 2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಡಿಕೆಶಿ

Spread the love ‎ಬೆಂಗಳೂರು: ಪಕ್ಷಬೇಧ ಮರೆತು ಎಲ್ಲರನ್ನೂ ಒಟ್ಟಿಗೇ ಕರೆದುಕೊಂಡು ಹೋಗಿ. 2028ರ ವಿಧಾನಸಭೆ ಚುನಾವಣೆ  ಗೆಲ್ಲುವುದು ನಿಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ