Breaking News

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Spread the love

ಆನೆಕಲ್‌: ಕೃಷಿ ಹೊಂಡಕ್ಕೆ  ಬಿದ್ದು ತಾಯಿ  ಮಗಳು ಸಾವನ್ನಪ್ಪಿದ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಲಾವಣ್ಯ (28), ಲಕ್ಷತಾ (8) ಎಂದು ಗುರುತಿಸಲಾಗಿದೆ. 2017ರಲ್ಲಿ ಗ್ರಾಮದ ಸಂಪತ್ ಜೊತೆಗೆ ಲಾವಣ್ಯ ವಿವಾಹವಾಗಿದ್ದರು. ಇನ್ನೂ ತಾಯಿ ಮಗಳ ಸಾವಿನ ವಿಚಾರವಾಗಿ ಮಹಿಳೆಯ ಪೋಷಕರು ಪತಿ ವಿರುದ್ಧ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮಹಿಳೆಯ ಪೋಷಕರು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಹುಟ್ಟುಹಬ್ಬದ ಕೇಕ್ ಜಗಳ: ಮೂವರು ಸ್ನೇಹಿತರ ಹತ್ಯೆ

Spread the loveಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ವೇಳೆ ಕೇಕ್ ಹಚ್ಚಿದ ವಿಚಾರಕ್ಕೆ ನಡೆದ ಜಗಳ ಮೂವರು ಸ್ನೇಹಿತರ ಕೊಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ