Breaking News

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ

Spread the love

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ.

ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ