Breaking News

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

Spread the love

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು.

ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, ಅನಿಲ್ ಚಿಕ್ಜಮಾದು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ