Home / ಅಂತರಾಷ್ಟ್ರೀಯ / ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .

ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .

Spread the love

ಜಾರ್ಖಂಡ್​ನಲ್ಲಿ ಆಡಳಿತರೂಢ ಜೆಎಮ್​ಎಮ್ ಪಕ್ಷದ ಲೊಮಿನ್ ಹೆಂಬ್ರೊಮ್ ಎಂಬ ಹೆಸರಿನ ಶಾಸಕ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಅಪಹರಣದಂಥ ಪ್ರಕರಣಗಳು ಹೆಚ್ಚಾಗಲು ಹೆಣ್ಣುಮಕ್ಕಳ ತಂದೆತಾಯಿಗಳೇ ಕಾರಣ ಎಂಬ ಆಘಾತಕಾರಿ ಹೇಳಿಕೆ ನೀಡಿ ತಮ್ಮ ಸರ್ಕಾರವನ್ನು ಮುಜುಗರಕ್ಕೆ ನೂಕಿದ್ದಾರೆ .

ಕಳೆದ ವಾರ ರಾಜ್ಯದ ದುಮ್ಕಾ ಎಂಬಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಹೆಂಬ್ರೊಮ್ ಹಾಗೆ ಹೇಳಿದ್ದಾರೆ . ಇದೇ ಕ್ಷೇತ್ರದಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿರುವುದರಿಂದ ಜೆ ಎಮ್​ಎಮ್ ಪಕ್ಷ ಅವರ ಹೇ   ಳಿಕೆಗೆ ಬಹಳ ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದೆ . ಆದರೆ ವಿರೋಧಪಕ್ಷವಾಗಿರುವ ಬಿಜೆಪಿ ಶಾಸಕ ಹೆಂಬ್ರೊಮ್ ಸರ್ಕಾರ ಮತ್ತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಒಬ್ಬ ಶಾಸಕ ಅಂಥ ಬೇಜವಾಬ್ದಾರಿ ಹೇಳಿಕೆ ನೀಡಿರು ವುದು ದುರದೃಷ್ಟಕರ ಎಂದಿದೆ .

ದುಮ್ಕಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಹೆಂಬ್ರೊಮ್ , ” ಯೌವನಸ್ಥ ಮಕ್ಕಳು ಗಾಂಜಾ ಸೇವಿಸಿ ಮನೆಗೆ ಬಂದಾಗ ಪಾಲಕರು ಸುಮ್ಮನಿದ್ದುಬಿಡುತ್ತಾರೆ . ಈಗ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇದೆ . ಹುಡುಗ – ಹುಡುಗಿಯರು ಮೇಲಿಂದ ಮೇಲೆ ಫೋನಲ್ಲಿ ಮಾತಾಡುತ್ತಲೇ ಇರುತ್ತಾರೆ , ಆದರೆ ತಂದೆ – ತಾಯಿಗಳು ತುಟಿಪಿಟಿಕ್ಕೆನ್ನುವುದಿಲ್ಲ . ವಯ ಸ್ಸಿಗೆ ಬಂದ ಹುಡುಗಿಯೊಬ್ಬಳು ಸಾಯಂಕಾಲದ ಹೊತ್ತು ಮನೆಯಿಂದ ಹೊರಗಡೆ ಹೋದರೆ ಅದಕ್ಕೆ ಪಾಲಕರು ಹೊಣೆಗಾರರಲ್ಲವೇ ? ಇಂಥ ಘಟನೆಗಳು ( ದಮ್ಕಾ ಗ್ಯಾಂಗ್-ರೇಪ್ ಮತ್ತು ಕೊಲೆ ) ನಡೆದಾಗಲೇ ಅವರು ನಿದ್ರೆಯಿಂದ ಎಚ್ಚೆತ್ತುಕೊಳ್ಳುತ್ತಾರೆ ,” ಅಂತ ಹೇಳಿದ್ದಾರೆ .

ಘಟನೆಗೆ ಸಂಬಂಧಿಸಿದಂತೆ , ಜೆಎಮ್​ಎಮ್ ನೇತೃತ್ವದ ಸಮ್ಮಿಶ್ರ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಸಮರ್ಥಿಸಿಕೊಂಡಿರುವ ಹೆಂಬ್ರೊಮ್ , ಅತ್ಯಾಚಾರದ ಬಗ್ಗೆ ದೂರು ದಾಖಲಾದ ಕೂಡಲೇ ಪೊಲೀಸ್ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದ್ದಾರೆ .

ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾದೇವ್ , ” ಶಾಸಕರ ಹೇಳಿಕೆ ಹೇವರಿಕೆ ಹುಟ್ಟಿಸುತ್ತದೆ . ಇವರೆಲ್ಲ ಸೇರಿ ಜಾರ್ಖಂಡನ್ನು ತಾಲಿಬಾನ್ ಆಗಿ ಪರಿವರ್ತಿಸಲು ನಿರ್ಧರಿಸಿರುವಂತಿದೆ,” ಎಂದಿದ್ದಾರೆ.

  ಜೆಎಮ್​ಎಮ್ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ಪಾಂಡೆ ತಮ್ಮ ಹೇಳಿಕೆಯಲ್ಲಿ ,” ಸಮಾಜದ ಕೆಡಕುಗಳ ಬಗ್ಗೆ ಹೆಂಬ್ರೊಮ್ ಮಾತಾಡಿದ್ದಾರೆ , ಪಕ್ಷದ ನಾಯಕರು ಅವರ ಜೊತೆ ಈಗಾಗಲೇ ಮಾತಾಡಿದ್ದು ಅವರು ನೀಡಿರುವ ಸ್ಪಷ್ಟೀಕರಣದಿಂದ ಸಂತೃಪ್ತರಾಗಿದ್ದಾರೆ ,” ಎಂದು ಹೇಳಿದ್ದಾರೆ .


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ