Breaking News

ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆ

Spread the love

ಮುಂಬೈಯಲ್ಲಿ ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಮಾಧ್ಯಮದವರಿಗಾಗಿಯೇ ಏರ್ಪಡಿಸಲಾಗಿದ್ದ ವಿಶೇಷ ವೈದ್ಯಕೀಯ ಶಿಬಿರದಲ್ಲಿ 171 ಜನರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇನ್ನಷ್ಟೆ ಪೂರ್ಣ ವರದಿ ಬರಬೇಕಿದೆ. ಆದರೆ, ಈವರೆಗೆ ಬಂದಿರುವ ವರದಿಗಳ ಪೈಕಿ ಕನಿಷ್ಟ 30 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ವಿನೋದ ಜಗದಾಳೆ ತಿಳಿಸಿದ್ದಾರೆ.

ಟಿವಿ ವರದಿಗಾರರು ಮತ್ತು ಕ್ಯಾಮರಾಮನ್ ಗಳೇ ಇದರಲ್ಲಿ ಹೆಚ್ಚಾಗಿದ್ದಾರೆ.

ಸಂಸದೆ ಪ್ರಿಯಾಂಕಾ ಚತುರ್ವೇದಿ ಮಾಧ್ಯಮದವರಿಗಾಗಿ ಏ.16, 17ರಂದು ವಿಶೇಷ ವೈದ್ಯಕೀಯ ತಪಾಸಣೆ ಶಿಬಿರ ಆಯೋಜಿಸಿದ್ದರು. ಅದರ ವರದಿ ಈಗ ಬರಲಾರಂಭಿಸಿದೆ.

ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಈಗ ವರದಿ ಬಂದಿರುವ ಪ್ರಕಾರ ಸೋಂಕು ದೃಢಪಟ್ಟವರಿಗೆಲ್ಲ ಚಿಕಿತ್ಸೆ ಆರಂಭಿಸಲಾಗಿದೆ. ಇನ್ನೂ ವರದಿ ಬಾರದವರನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ಮಾಧ್ಯಮದವರಿಗಾಗಿಯೇ ಇನ್ನೊಂದು ವಿಶೇಷ ತಪಾಸಣೆ ಶಿಬಿರ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಲ್ಲಿ ವಿನಂತಿಸಲಾಗಿದೆ.

ಮಾಧ್ಯಮದವರು ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಲು ಮತ್ತು ಸೂಕ್ತ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ