Breaking News
Home / ಅಂತರಾಷ್ಟ್ರೀಯ / ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

Spread the love

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು.

ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ ಸ್ನೇಹಿತ ಮನೆಗೆ ಬೀಗ ಹಾಕಿ ಅಲ್ಲಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ.

ಮತ್ತೋರ್ವ ಸ್ನೇಹಿತ ದೀಪಕ್​ ಭರತ್ ಹಾಗೂ ಮಗುವಿನ ಜೊತೆಯಲ್ಲಿ ಮನೆಯಲ್ಲಿ ಉಳಿದಿದ್ದಾರೆ. ಬಳಿಕ ಮನೆಗೆ ಬೆಂಕಿ ಹೊತ್ತಿಕೊಂಡಿದ್ದನ್ನ ಕಂಡ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಘಟನೆಯಲ್ಲಿ ದೀಪಕ್ ಹಾಗೂ ಬಾಲಕ ತನ್ವೀತ್ ಸಾವನ್ನಪ್ಪಿದ್ದಾರೆ. ಭರತ್​ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನ ಎ.ಸಿ.ಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಪೆಟ್ರೋಲ್​​ ವಾಸನೆ ಬರುತ್ತಿದ್ದುದು ಗಮನಕ್ಕೆ ಬಂದಿದೆ. ಹೀಗಾಗಿ ಮನೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಬೆಳ್ಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ