Breaking News
Home / ಜಿಲ್ಲೆ / ಮೈಸೂರ್ / ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್

Spread the love

ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಒಡಗೂಡಿ ಭೇಟಿ ನೀಡಿ ಪರಿಶೀಲಿಸಿದರು.

ಇದೇ ವೇಳೆ, 16 ಹುಲಿಗಳಿಗೆ ಮಾಂಸಾಹಾರ ನೀಡಲು ಒಂದು ದಿನ ವೆಚ್ಚವಾದ 25 ಸಾವಿರ ರೂಪಾಯಿಯನ್ನು ವೈಯಕ್ತಿಕವಾಗಿ ನೀಡಿದರು.

ಪ್ರಾಣಿ-ಪಕ್ಷಿಗಳಿಗೆ ಕೊರೋನಾ ಹಿನ್ನೆಲೆಯಲ್ಲಿ ಕೈಗೊಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆಹಾರ ಕುಡಿಯುವ ನೀರು ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು


Spread the love

About Laxminews 24x7

Check Also

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ