Breaking News

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್:

Spread the love

ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ನಾಲ್ಕು ಲಕ್ಷ ಹಳ್ಳಿಗಳ 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ಚಂಪತ್ ರೈ ಹೇಳಿದ್ದಾರೆ.

ಅಯೋಧ್ಯೆಯಲ್ಲಿ 70 ಎಕರೆಯಲ್ಲಿ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಮುಂದಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಜಮೀನನ್ನು ಖರೀದಿಸಿ 107 ಎಕರೆಗೆ ವಿಸ್ತರಿಸಲು ಟ್ರಸ್ಟ್ ಯೋಜನೆ ರೂಪಿಸಿದೆ. ಅದಕ್ಕಾಗಿ ಸ್ಥಳೀಯ ನಿವಾಸಿಗಳ ಜಮೀನನ್ನು ಖರೀದಿಸಲಾಗುತ್ತಿದೆ ಎಂದರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ