ನವದೆಹಲಿ: ಸೋಮವಾರ ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆ ಸೇರಿದ ಮಾಜಿ ರಾಷ್ಟ್ರಪತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಸೇನಾ ಆರ್. ಆರ್. ಆಸ್ಪತ್ರೆ ಬುಲೆಟಿನ್ ಹೊರಡಿಸಿದೆ.
ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ. ಅವರ ದೇಹದಲ್ಲಿ ರಕ್ತ ಚಲನೆ, ಹೃದಯಬಡಿತ ಸಾಧಾರಣ ಸ್ಥಿತಿಯಲ್ಲಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆರ್. ಆರ್. ಆಸ್ಪತ್ರೆಯ ಬುಲೆಟಿನ್ನಲ್ಲಿ ಹೇಳಲಾಗಿದೆ.
ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಪ್ರಣಬ್ ಅವರಿಗೆ ಬ್ರೈನ್ ಕ್ಲಾಟ್ ಸರ್ಜರಿ ಮಾಡಲಾಗಿದ್ದು ಸರ್ಜರಿ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಚೇತರಿಕೆ ಕಂದು ಬಂದಿಲ್ಲ ಎಂದು ಆಸ್ಪತ್ರೆ ಹೇಳಿದೆ. ದೇಶದ ಹಲವು ಗಣ್ಯರು ಪ್ರಣಬ್ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.