Breaking News
Home / ಜಿಲ್ಲೆ / ಪಾದರಾಯನಪುರದಲ್ಲಿ ಹೊಸ ನಿಯಮಗಳು……..

ಪಾದರಾಯನಪುರದಲ್ಲಿ ಹೊಸ ನಿಯಮಗಳು……..

Spread the love

ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಠಿಣ ನಿಯಮಗಳು ಇಂದಿನಿಂದ ಅನ್ವಯವಾಗಲಿದ್ದು, ಜನರು ಮನೆಯಿಂದ ಹೊರ ಬರುವಂತಿಲ್ಲ.

ಸೀಲ್‍ಡೌನ್ ಆಗಿದ್ರೂ ಯಾವುದೇ ರೀತಿಯ ಭಯವಿಲ್ಲದೇ ಜನ ಆರಾಮವಾಗಿ ಮನೆಯಿಂದ ಹೊರಬಂದು ಕಾಲಹರಣ ಮಾಡುತ್ತಿದ್ದರು. ಭಾನುವಾರ ರಾತ್ರಿ ನಡೆದ ಗಲಭೆಯಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಪುಂಡರನ್ನ ಬಂಧಿಸಿದ್ದಾರೆ. ಇಡೀ ಪಾದರಾಯನಪುರ ಪೊಲೀಸ್ ಸರ್ಪಗಾವಲಿನಲ್ಲಿದೆ. ದಿನ ಬೆಳ್ಳಂ ಬೆಳಗ್ಗೆ ಹಾಲು, ತರಕಾರಿ ನೆಪ ಹೇಳಿಕೊಂಡು ಹೊರಬರುತ್ತಿದ್ದ ಜನ ಈಗ ಮನೆಯಿಂದ ಹೊರಬರುತ್ತಿಲ್ಲ.

ಹೊಸ ನಿಯಮಗಳು:
1. ಮನೆಯಿಂದ ಯಾರು ಹೊರಗಡೆ ಬರುವಂತಿಲ್ಲ. (ತುರ್ತು ವೈದ್ಯಕೀಯ ಹೊರತುಪಡಿಸಿ)
2. ಪಾದರಾಯನಪುರ ಏರಿಯಾ ಸಂಪೂರ್ಣ ಲಾಕ್‍ಡೌನ್.
3. ಪ್ರವೇಶ ಮತ್ತು ನಿರ್ಗಮನಗೆ ಒಂದೇ ಮಾರ್ಗ. ಉಳಿದೆಲ್ಲ ರಸ್ತೆಗಳು ಬಂದ್
4. ಲಾಕ್‍ಡೌನ್ ಪ್ರದೇಶಕ್ಕೆ ದಿನಕ್ಕೊಂದು ಬಾರಿ ತರಕಾರಿ, ಹಾಲು, ದಿನಸಿಯವರ ಪ್ರವೇಶ
5. ಆಯಾಯ ವ್ಯಾಪಾರಿಗಳಿಗೆ ಕೋಡ್ ಹಾಗೂ ಸಮವಸ್ತ್ರ ಕೊಡಲಾಗುತ್ತೆ. ಅವರಿಗಷ್ಟೇ ಪ್ರವೇಶ
6. ಮನೆಬಾಗಿಲಿಗೆ ದಿನಸಿ ,ಔಷಧಿ ತಲುಪಿಸಲಾಗುತ್ತೆ.
7. ಇಡೀ ಚಟುವಟಿಕಗೆ ಕಂಪ್ಲೀಟ್ ಬ್ರೇಕ್.
8. ವೈದ್ಯರನ್ನು ಹೊರತು ಪಡಿಸಿ ಈ ಏರಿಯಾಗೆ ಬೇರೆ ಯಾರ ಎಂಟ್ರಿಯೂ ಇಲ್ಲ. ಸಂಪೂರ್ಣ ಪ್ರವೇಶ ನಿಷಿದ್ಧ.
9. ಎಂಎಲ್‍ಎ ಸೇರಿದಂತೆ ಜನಪ್ರತಿನಿಧಿಗಳ ನಿವಾಸ ಕಂಟೈನ್‍ಮೆಂಟ್ ಝೋನ್ ನಲ್ಲಿದ್ರೇ ಅವರು ಕೂಡ ಹೊರಗೆ ಬರುವಂತಿಲ್ಲ.
10. ಈಗಾಗಲೇ ಪಾದರಾಯನಪುರದಲ್ಲಿದೆ ಗರುಡು ಟೀಂ ಇದೆ.


Spread the love

About Laxminews 24x7

Check Also

ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್​ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್​ ವಿತರಣೆ

Spread the love ಆನೇಕಲ್: ದೇಶಕ್ಕಾಗಿ ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ