Breaking News

ನೆಲಮಂಗಲ ಬಳಿ ಟ್ರಾಫಿಕ್ ಜಾಮ್- ಬೆಂಗಳೂರಿನತ್ತ ಜನರು…………

Spread the love

ಬೆಂಗಳೂರು: ಲಾಕ್‍ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ.

ಲಾಕ್‍ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರು ಯಾವ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಕಂಟೈನ್‍ಮೆಂಟ್ ಝೋನ್ ನಲ್ಲಿಯ ಜನರು ಬೆಂಗಳೂರಿಗೆ ಬಂದ್ರೆ ಹೇಗೆ ಎಂಬ ಆತಂಕ ಸಹ ಮನೆ ಮಾಡಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ