ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಹಕ್ಕಿಜ್ವರದ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಂಸ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ.ಯುಗಾದಿ ಹಬ್ಬದ ಹೊಸತಡುಕು ದಿನ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿ ಬಲಿ ಕೊಡುವಂತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಅಂತಾ ಆದೇಶ ಹೊರಡಿಸಿದ್ದಾರೆ.ಕೊರೊನಾ ವೈರಸ್ ಹರಡಿದಾಗಿನಿಂದ ಈಗಾಗಲೇ ಕುಕ್ಕುಟೋದ್ಯಮ ನೆಲ ಕಚ್ಚಿದ. ನಮ್ಮ ರಾಜ್ಯದಲ್ಲೇ ಲಕ್ಷಾಂತರ ಕೋಳಿಗಳನ್ನು ಜೀವಂತವಾಗಿ ಹೂತು, ನಾಶ ಮಾಡಲಾಗಿದೆ. ಮತ್ತೊಂದೆಡೆ ಮಟನ್ ರೇಟ್ ಗಗನಕ್ಕೇರಿದೆ. ಇಷ್ಟೆಲ್ಲ ಅವಘಡದ ನಡುವೆ ಚಿಕನ್ ಪ್ರಿಯರಂತೂ ವಿರಹ ವೇದನೆಯಿಂದ ಬಳಲುವಂತೆ ಆಗ್ತಿದೆ. ಈ ನಡುವೆ ಬಿಬಿಎಂಪಿಯ ಈ ನಿರ್ಧಾರವಂತೂ ದೊಡ್ಡ ಶಾಕ್ ನೀಡಿದಂತಾಗಿದೆ.
