ಡಾಕಾ,ಜ.20- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್ಸಿಆರ್)ಯ ಅವಶ್ಯಕತೆ ಹಾಗೂ ಅನಿವಾರ್ಯತೆಯೂ ಇರಲಿಲ್ಲ. ಆದರೂ ಇದು ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ತಟಸ್ಥ ನೀತಿ ಅನುಸರಿಸಲಿದೆ ಎಂದು ಪ್ರಧಾನಿ ಶೇಕ್ ಹಸೀನಾ ತಿಳಿಸಿದರು.
2014, ಡಿಸೆಂಬರ್ 31ರ ನಂತರದ ಹಿಂದು, ಬ್ಲಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಬುದ್ದಿಸ್ಟ್ , ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ಗಳು ಸಮುದಾಯದವರಿಗೆ ಭಾರತೀಯ ಪೌರತ್ವ ಸಿಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮಾತನಾಡಿದ ಅವರು, ಭಾರತದಿಂದ ಯಾವುದೇ ವಲಸೆ ಕಂಡುಬಂದಿಲ್ಲ.