Breaking News
Home / ಜಿಲ್ಲೆ / ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್‌ಆರ್‌ಸಿ  ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್‌ಆರ್‌ಸಿ  ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

Spread the love

ಬೆಂಗಳೂರು, ಫೆ.4-ದೇಶಾದ್ಯಂತ ಕಿಚ್ಚು ಹಚ್ಚಿದ್ದ ಎನ್‌ಆರ್‌ಸಿ  ಬಗ್ಗೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು, ಎನ್‌ಆರ್‌ಸಿಯನ್ನು ದೇಶಾದ್ಯಂತ ಜಾರಿಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದೆ.

ಲೋಕಸಭೆಯಲ್ಲಿ ಸಂಸದರು ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ನ್ಯಾಷನಲ್ ರಿಜಿಸ್ಟರ್ ಆಫ್ ಇಂಡಿಯನ್ ಸಿಟಿಜನ್ (ಎನ್‍ಆರ್‍ಐಸಿ)ಯನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಈ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಇದೇ ರೀತಿಯ ಗೊಂದಲದ ಹೇಳಿಕೆಗಳು ಕೇಳಿ ಬಂದಿದ್ದವು. ಪ್ರಧಾನಿ ನರೇಂದ್ರ ಮೋದಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವ ಸಂದರ್ಭದಲ್ಲಿ ದೇಶಾದ್ಯಂತ ಎನ್‍ಆರ್‍ಸಿ ಜಾರಿಗೊಳಿಸುವ ಯಾವುದೇ ಚರ್ಚೆಗಳಾಗಿಲ್ಲ ಎಂದು ತಿಳಿಸಿದರು.

ಅದೇ ದಿನ ಬೇರೆಡೆ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‍ಷಾ, ಸಿಎಎ ಮತ್ತು ಎನ್‍ಆರ್‍ಸಿ ಎರಡನ್ನೂ ಜಾರಿಗೊಳಿಸುವುದರಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು. ಈಗ ದೆಹಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಎನ್‍ಆರ್‍ಸಿ ಬಗ್ಗೆ ಮತ್ತೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದೆ.


Spread the love

About Laxminews 24x7

Check Also

ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಮನವಿ

Spread the loveಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ‌ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ