Breaking News
Home / Uncategorized / ಜೂ.ಎನ್‌ಟಿಆರ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಕೆಜಿಎಫ್ ನಿರ್ದೇಶಕ……….

ಜೂ.ಎನ್‌ಟಿಆರ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಕೆಜಿಎಫ್ ನಿರ್ದೇಶಕ……….

Spread the love

ಹೈದರಾಬಾದ್: ಕೆಜಿಎಫ್ ಸಿನಿಮಾ ಹಿಟ್ ಆದ ಬೆನ್ನಲ್ಲೇ ಚಿತ್ರ ತಂಡ ಚಾಪ್ಟರ್-2ನಲ್ಲಿ ಬ್ಯುಸಿಯಾಗಿತ್ತು. ಇದೀಗ ಚಾಪ್ಟರ್-2 ಚಿತ್ರೀಕರಣ ಅಂತಿಮ ಹಂತ ತಲುಪಿದ್ದು, ಚಿತ್ರ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲ ಮನೆ ಮಾಡಿತ್ತು. ಇದರ ಬೆನ್ನಲ್ಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ಮಹೇಶ್ ಬಾಬು ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಎಲ್ಲ ಗಾಸಿಪ್‍ಗಳು ಸುಳ್ಳಾಗಿದ್ದು, ಸರ್ಪ್ರೈಸ್ ಸುದ್ದಿಯೊಂದು ಹೊರ ಬಿದ್ದಿದೆ.

ಹೌದು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ ಸಿನಿಮಾದಲ್ಲಿ ನಟಿಸಲು ಹಲವು ನಟರು ತುದಿಗಾಲಲ್ಲಿ ನಿಂತಿದ್ದು, ಅದೇ ರೀತಿ ನಿರ್ಮಾಪಕರು ಸಹ ಇವರ ನಿರ್ದೇಶನದ ಚಿತ್ರಗಳಿಗೆ ಹಣ ಹೂಡಲು ಮುಂದು ಬರುತ್ತಿದ್ದಾರೆ. ಹೀಗಿರುವಾಗ ಪ್ರಶಾಂತ್ ನೀಲ್ ಯಾವ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದೀಗ ಈ ಗುಟ್ಟು ಬಯಲಾಗಿದೆ. ಜೂ.ಎನ್‍ಟಿಆರ್ ಅವರ 31ನೇ ಸಿನಿಮಾಗೆ ಪ್ರಶಾಂತ್‍ನೀಲ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

ಮೇ 20ರಂದು ಜೂ.ಎನ್‍ಟಿಆರ್ ಹುಟ್ಟುಹಬ್ಬ, ಈ ದಿನ ಚಿತ್ರದ ಕುರಿತು ಅಧಿಕೃತ ಮಾಹಿತಿ ಹೊರ ಬೀಳಲಿದೆ ಎನ್ನಲಾಗಿದೆ. ಈಗಾಗಲೇ ಜೂನಿಯರ್ ಎನ್‍ಟಿಆರ್ ಆರ್‍ಆರ್‍ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇತ್ತ ಪ್ರಶಾಂತ್ ನೀಲ್ ಸಹ ಕೆಜಿಎಫ್-2 ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಈ ಎರಡೂ ಚಿತ್ರಗಳು ಮುಗಿದ ಬಳಿಕ ಈ ಇಬ್ಬರ ಕಾಂಬಿನೇಷನ್ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, 150 ಕೋಟಿ ರೂ.ವೆಚ್ಚದಲ್ಲಿ ಸಿನಿಮಾ ತಯಾರಾಗಲಿದೆ. ಇದು ಸಹ ಪ್ಯಾನ್ ಇಂಡಿಯಾ ಸಿನಿಮಾ ಎನ್ನಲಾಗಿದೆ. ಆಕ್ಷನ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಪ್ರಶಾಂತ್ ನೀಲ್, ಇದೀಗ ಮ್ಯೂಸಿಕ್ ಹಾಗೂ ಡ್ಯಾನ್ಸ್‍ಗೆ ಸಂಬಂಧಿಸಿದ ಕಥೆ ಹೆಣೆದಿದ್ದಾರಂತೆ. ಈ ಬೃಹತ್ ಯೋಜನೆಗಾಗಿ ಯಂಗ್ ಟೈಗರ್ ಕುಚಿಪುಡಿ ನೃತ್ಯ ಕಲಿಯಲಿದ್ದಾರಂತೆ. ಈ ಬಹುನಿರೀಕ್ಷಿತ ಚಿತ್ರ 2021ರಲ್ಲಿ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಅಲ್ಲದೆ ಆರ್‍ಆರ್‍ಆರ್ ನಡುವೆಯೇ ಎನ್‍ಟಿಆರ್-30 ಸಿನಿಮಾಗೂ ಜೂ.ಎನ್‍ಟಿಆರ್ ತಯಾರಾಗಿದ್ದು, ಇದು ಆರ್‍ಆರ್‍ಆರ್ ನಂತರ ಈ ಸಿನಿಮಾ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇದನ್ನು ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಿಸುತ್ತಿದ್ದಾರೆ. ಇತ್ತ ಪ್ರಶಾಂತ್ ನೀಲ್ ಸಹ ಕೆಜಿಎಫ್ ಚಾಪ್ಟರ್-2ರಲ್ಲಿ ಬ್ಯುಸಿಯಾಗಿದ್ದು, ಇದು ಅಕ್ಟೋಬರ್ 23ರಂದು ಬಿಡುಗಡೆಯಾಗುತ್ತಿದೆ.

ಕೆಜಿಎಫ್ ಸಕ್ಸಸ್ ಬಳಿಕ ಚಾಪ್ಟರ್-2 ಸಹ ಅಷ್ಟೇ ಕುತೂಹಲ ಹುಟ್ಟಿಸಿದ್ದು, ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹೀಗಾಗಿ ಚಿತ್ರ ತಂಡ ಸಹ ಅಷ್ಟೇ ವೇಗವಾಗಿ ಚಿತ್ರೀಕರಣ ಮುಗಿಸಿದೆ. ಆದರೆ ಇದೀಗ ಲಾಕ್‍ಡೌನ್ ಹಿನ್ನೆಲೆ ಅಂತಿಮ ಹಂತದ ಚಿತ್ರೀಕರಣ ಸ್ಥಗಿತವಾಗಿದೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ