Breaking News

ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

Spread the love

ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ.

ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು ಬಂದವು.

ಸ್ಥಳದಲ್ಲಿ ನೂರಾರು ಜನರು ಸೇರಿರುವ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರನ್ನು ಕಳುಹಿಸುವಲ್ಲಿ ಸುಸ್ತಾದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ