ಬೆಂಗಳೂರು: ಸಿಎಂ ಆಗಿ ತಿಂಗಳು ಪೂರ್ಣಗೊಂಡ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್ ಅವರು ಕುಟಂಬ ಸಮೇತರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಉಪಹಾರದ ಜೊತೆ ಮಾತುಕತೆ ನಡೆಸಿದರು.
ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ ಕೂಟ ನಡೆಸಿದ್ದಾರೆ. ಈ ವೇಳೆ ಡಿಕೆಶಿ ಪತ್ನಿ ಉಷಾ ಹಾಗೂ ಡಿಕೆಶಿ ಅವರು ಉಡುಗೊರೆಗಳನ್ನು ಕೊಟ್ಟು ಅಭಿನಂದಿಸಿದ್ದಾರೆ.
ಈ ಮೂಲಕ ಸುಲಲಿತವಾಗಿ ಅಧಿಕಾರ ಹಸ್ತಾಂತರ ಮಾಡಿಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸದಾ ಉತ್ತಮ ಬಾಂಧವ್ಯದ ಸಂದೇಶವನ್ನು ನೀಡಿ, ಡಿಕೆಶಿ ಒಗ್ಗಟ್ಟನ್ನು ತೋರ್ಪಡಿಸಿದ್ದಾರೆ.
Laxmi News 24×7