ಬೆಳಗಾವಿ : ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗಳಗತಾ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ ನಡೆಸಿದ ಗ್ರಾಪಂ ಅಧ್ಯಕ್ಷೆ ಮಾಧುರಿ ಪಾಟೀಲ, ಪಿಡಿಓ ಚಂದ್ರಕಾಂತ ಮುರಗೋಡ,ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರುದ್ರಮುನಿಸ್ವಾಮಿ ಚಿಕ್ಕಮಠ,ಗ್ರಾಪಂ ಸದಸ್ಯ ಲಕ್ಷ್ಮಣ ಶಿಪ್ಪೂರೆ,ಬಾಳಾಸಾಹೇಬ ಬೇಡಿಕಿಹಾಳ ಮತ್ತು ದಿನಗೂಲಿ ನೌಕರ ವಿಕಾಸ ಹಟ್ಟಿಯವರ ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಮೂರು ವರ್ಷ ಕಾರಾಗೃಹ ಶಿಕ್ಷೆ,ಮತ್ತು 100100 ರೂ. ದಂಡ ವಿಧಿಸಿ ಈಚೆಗೆ ತೀರ್ಪು ಪ್ರಕಟಿಸಿದೆ. ಗಳತಗಾ …
Read More »ಡಿಸಿಸಿ ಬ್ಯಾಂಕ್ಗೆ 56.25 ಕೋಟಿ ರೂ. ನಿವ್ವಳ ಲಾಭ
ರಾಜ್ಯದಲ್ಲಿಯೇ ಅತಿಹೆಚ್ಚು ಠೇವಣಿ ಹೊಂದಿರುವ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಟ್ಟಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಬಿಡಿಸಿಸಿ) ಪ್ರಸಕ್ತ ಸಾಲಿನಲ್ಲಿ 56.25 ಕೋಟಿ ರೂ. ನಿವ್ವಳ ಲಾಭ ಹೊಂದಿದೆ ಎಂದು ಅಧ್ಯಕ್ಷ ಅಣ್ಣಾಸಾಹೇಬ ಜೋಲ್ಲೆ ತಿಳಿಸಿದರು. ನಗರದ ಬಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಲ್ಲಿ ಅತಿ ಹೆಚ್ಚು ಬೆಳೆಸಾಲ ವಿತರಿಸಿದ ಬ್ಯಾಂಕ್ ನಮ್ಮದಾಗಿದೆ. 2025-26ನೇ ಸಾಲಿನಲ್ಲಿ ಜಿಲ್ಲೆಯ …
Read More »ಜಿಲ್ಲೆಯಲ್ಲಿ 8,309 ಬೆಳೆ ವಿಮೆ ಅರ್ಜಿ ತಿರಸ್ಕಾರ
ಬೆಳಗಾವಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ವಿಮಾ ಸಂಸ್ಥೆಯಿಂದ 8,309 ಬೆಳೆ ವಿಮೆ ಪ್ರಸ್ತಾವನೆಗಳು ತಿರಸ್ಕೃತವಾಗಿವೆ. ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆ ಬೆಳೆ ಸಮೀಕ್ಷೆಯ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗೆ ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಅಶದಲ್ಲಿ ವಿಮಾ ಪರಿಹಾರಕ್ಕಾಗಿ ಲೆಕ್ಕ ಹಾಕಲಾಗಿದೆ.ಇವುಗಳಲ್ಲಿ ಮುಂಗಾರು …
Read More »ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಸಂಕಲ್ಪ
ಬೆಳಗಾವಿ:ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆ ಕೈಬಿಡಲು ಸ್ವಯಂ ಪ್ರೇರಣೆ ಸಂಕಲ್ಪ ಮಾಡಬೇಕು ಎಂದು ಪಾಲಿಕೆ ಆಯುಕ್ತ ಕಾರ್ತಿಕ್.ಎಂ ಹೇಳಿದರು. ನಗರದ ನರಗುಂದಕರ ಬಾವಿ ಚೌಕ್ನಲ್ಲಿ ಗುರುವಾರ ವಿಶ್ವ ಜಲದಿನ, ಪ್ಲಾಸ್ಟಿಕ್ ಮುಕ್ತ ಅರಿವು ಹಾಗೂ ಕ್ಲಾಥ್ ಬ್ಯಾಗ್ ವೆಡ್ಡಿಂಗ್ ಯಂತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅತಿಯಾದ ಪ್ಲಾಸ್ಟಿಕ್ ಬಳಕೆ ಜನರು ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೆ, ಪರಿಸರ …
Read More »ಅಭಿವೃದ್ಧಿ ಕಾರ್ಯ ಮುಂದುವರಿಸಲು ಮೇಟಿ ಬೆಂಬಲಿಸಿ
ಅಮೀನಗಡ: ಜಿದ್ದಾಜಿದ್ದಿನಿಂದ ಕೂಡಿರುವ ಬಾಗಲಕೋಟೆ ಉಪ ಚುನಾವಣೆಯ ಪ್ರಚಾರ ಹಿನ್ನೆಲೆಯಲ್ಲಿ ಶಾಸಕ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗುರುವಾರ ಅಮೀನಗಡ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರಕ್ಕೆ ಮುನ್ನ ಮಂಗಳಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಅವರು, ಬಳಿಕ ವಾರ್ಡ್ ಸಂಖ್ಯೆ 06, 07 ಮತ್ತು 08 ಸೇರಿ ಹಲವು …
Read More »ಮೂರು ವರ್ಷದಲ್ಲಿ 2809 ಜನ ರೈತರ ಸಾವು
ಸ್ವಂತ, ಸ್ವಾರ್ಥಕ್ಕೋಸ್ಕರ ರಾಜ್ಯದ ಜನರಿಗೆ ವಂಚನೆ: ವಿ.ಸೋಮಣ್ಣ ಬಾಗಲಕೋಟೆ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ಸ್ವಂತಕ್ಕೋಸ್ಕರ, ಸ್ವಾರ್ಥಕ್ಕೋಸ್ಕರ ಮತ್ತು ರಾಜ್ಯದ ಜನರಿಗೆ ವಂಚನೆ ಮಾಡುವ ಕೆಲಸ ಮಾಡಿ, ಈ ರಾಜ್ಯವನ್ನು ಕತ್ತಲೆ ಕೋಣೆಯಲ್ಲಿಡುವ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ನಮ್ಮದೇ ಆದ ಪಾಲುದಾರಿಕೆಯನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಯಾವುದೇ ಶಾಸಕರೂ ತನ್ನ …
Read More »ಬಸನಗೌಡ ಯತ್ನಾಳ ಭರ್ಜರಿ ಪ್ರಚಾರ
ಬಾಗಲಕೋಟೆ: ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು ಬಿಜೆಪಿ ಪ್ರಚಾರಕ್ಕೆ ಜನ ಬೆಂಬಲ ಪ್ರವಾಹದಂತೆ ಹರಿಯುತ್ತಿದೆ. ಇಂದು ಶಾಸಕ ಬಸನಗೌಡ ಯತ್ನಾಳ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಗ್ರಾಮೀಣ ಪ್ರದೇಶಗಳಾದ ಸುತಗುಂಡಾರ, ಮುಗಳೊಳ್ಳಿ, ಚಿಕ್ಕಮ್ಯಾಗೇರಿ, ಹಿರೇಮ್ಯಾಗೇರಿಗಳಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ದುರಾಡಳಿತ, ಒಂದು ಕೋಮಿನವರಿಗೆ ಆದ್ಯತೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ …
Read More »ಬಿಜೆಪಿ ಆಯ್ಕೆಯಿಂದ ಭ್ರಷ್ಟ ಆಡಳಿತಕ್ಕೆ ಚಾಟಿ ಏಟು: ವಿ.ಸೋಮಣ್ಣ
ಬಿಜೆಪಿ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ ಬಾಗಲಕೋಟೆ: ಭ್ರಷ್ಟ ಆಡಳಿತಕ್ಕೆ ಚಾಟಿ ಏಟು ಕೊಡಲು ಸೂಕ್ತ ಅವಕಾಶ ಒದಗಿ ಬಂದಿದ್ದು ಐಹೊಳೆ ಅಭಿವೃದ್ಧಿಗೆ ಮಾರಕವಾದ ಕಾಂಗ್ರೆಸ್ ತೊಲಗಿಸಿ ಬಿಜೆಪಿ ಗೆಲ್ಲಿಸಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಉಪಚುನಾವಣೆ ಹಿನ್ನೆಲೆ ಐಹೊಳೆಯಲ್ಲಿ ಹಮ್ಮಿಕೊಂಡ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಐಹೊಳೆ ಸ್ಥಳಾಂತರಕ್ಕೆ ಸರಕಾರ ಆದೇಶ ಮಾಡಿದರೂ ಅದನ್ನು ನಿಲ್ಲಿಸಿ ಕಾಂಗ್ರೆಸ್ ಮೋಸ ಮಾಡಿದೆ. ಉಪಚುನಾವಣೆ ಮುಗದ ತಕ್ಷಣವೇ ಕೇಂದ್ರ ಸರಕಾರದಿಂದ …
Read More »ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದರು. ಅವರನ್ನು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ ಮೋಹನ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
Read More »ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ
ಹಾಸನ: ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾ.22ರಂದು ಬೆಳಿಗ್ಗೆ ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ …
Read More »
Laxmi News 24×7