Breaking News

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

ಉಡುಪಿ: ಪ್ರೇಮ  ಪ್ರಕರಣ ರಾಜಿ ಪಂಚಾಯ್ತಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ  ಚಾಕು ಇರಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆ  ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರಿಂದ ಮೀನುಗಾರ ಮುಖಂಡನಿಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, …

Read More »

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದ್ದಾರೆ. ಹೌದು, ಪ್ರತಿನಿತ್ಯ ತಮ್ಮ ಕಾಯಕದ ಮೂಲಕ ನಗರವನ್ನ ಸ್ವಚ್ಛ ಮಾಡಲು ಶ್ರಮಿಸುವ 36 ಜನ ಪೌರಕಾರ್ಮಿಕರನ್ನ ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಉಚಿತವಾಗಿ ವಿಮಾನಯಾನ …

Read More »

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

ಹಾಸನ: ವಿದ್ಯಾರ್ಥಿಗಳಿಗೆ  ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ …

Read More »

ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಗೋಕಾಕ: ಗೋಕಾಕ ನಗರದ ಸಮೀಪದ ಲೋಳಸೂರ ಗ್ರಾಮದಲ್ಲಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ 30.21 ಕೋಟಿ ರೂ. ವೆಚ್ಚದ ಲೋಳಸೂರ ಸೇತುವೆ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಪರಿಶೀಲಿಸಿದರು. ನೂತನ ಸೇತುವೆ ನಿರ್ಮಾಣದಿಂದ ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂದರ್ಭಗಳಲ್ಲಿಯೂ ಸಹ ಅದನ್ನು ಎದುರಿಸಲಿಕ್ಕೆ ಇನ್ನು ಮುಂದೆ ಸರಳವಾಗಲಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿದ್ದ ಕಿರಿದಾದ ಸೇತುವೆ …

Read More »

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ …

Read More »

ಶೇ.15ರ ಮೀಸಲಾತಿಯನ್ನು ಸಚಿವ ಸಂಪುಟ ಸಭೆಯಲ್ಲಿ cm ಚರ್ಚಿಸಿ ನಿರ್ಧರಿಸಲಿಸ್ದಾರೆ: ಕೆಹೆಚ್. ಮುನಿಯಪ್ಪ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಹಾಗೂ  ಅಬಕಾರಿ ಸಚಿವರಾದ  ಆರ್.ಬಿ. ತಿಮ್ಮಾಪೂರ್ ರವರ ನೇತೃತ್ವದಲ್ಲಿ ನಗರದ ರಾಡಿಸನ್ ಬ್ಲೂ (ಏಟ್ರಿಯಾ) ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ನಂತರ ಮಾತನಾಡಿದ ಸಚಿವರು ಒಳಮೀಸಲಾತಿ ಕಲ್ಪಿಸುವಲ್ಲಿ ನಮ್ಮ ಸರ್ಕಾರ ಕಂಕಣ ಬದ್ಧವಾಗಿದೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನದ ಜೊತೆಗೆ …

Read More »

ಖಾಲಿ ಹುದ್ದೆಗಳ ನೇಮಕಾತಿ ಕಡ್ಡಾಯವಾಗಿ ಜಾರಿಗೊಳಿಸಬೇಕು: ಸುರೇಶ ಐಹೊಳೆ ಒತ್ತಾಯ

ಹಾರೂಗೇರಿ: ಸಚಿವ ಸಂಪುಟ ನಿರ್ಣಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಸರ್ಕಾರದ ಆದೇಶದ ಪ್ರಕಾರ ಶೇ.15ರಷ್ಟು ಒಳ ಮೀಸಲಾತಿ ರೋಸ್ಟರ್ ಮಾರ್ಗಸೂಚಿಗಳಂತೆ 56,342 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಮಾದಿಗ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ ಐಹೊಳೆ ಹೇಳಿದರು. ಪಟ್ಟಣದ ಸುರೇಶ ಐಹೊಳೆ ಗೃಹ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನ …

Read More »

ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹೆಚ್ಚಿದೆ

ನಿಪ್ಪಾಣಿ: ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆಗಮನದಿಂದ ಕ್ಷೇತ್ರದಲ್ಲಿ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು. ತಾಲೂಕಿನ ಕಾರದಗಾ ಗ್ರಾಮದ ಜಿಪಂ ಮಾಜಿ ಸದಸ್ಯೆ ಸುಮಿತ್ರಾ ಉಗಳೆ ಹಾಗೂ ಸುದೀಪ …

Read More »

ಸ್ವಯಂ ಉದ್ಯೋಗದಿಂದ ನಿಶ್ಚಿತ ಗುರಿ ಸಾಧ್ಯ

ರಾಮದುರ್ಗ: ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ಆತ್ಮವಿಶ್ವಾಸದೊಂದಿಗೆ ಸ್ವಯಂ ಉದ್ಯೋಗ ಕೆಗೊಂಡದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ ಎಂದು ವಿರಕ್ತಮಠ ಟ್ರಸ್ಟ್​ ಅಧ್ಯ ಪ್ರದಿಪಕುಮಾರ ಪಟ್ಟಣ ಹೇಳಿದರು. ನಗರದ ಅರಮನೆ ಆವರಣದಲ್ಲಿರುವ ಕ್ಯಾಂಬ್ರೀಡ್ಜ್​ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈಚೆಗೆ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್​ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಯುವಕರು ಭವಿಷ್ಯ ರೂಪಿಸಿಕೊಳ್ಳಲು ಶಿಣದ ಪಾತ್ರ ಅಲ್ಲಗಳೆಯುವಂತಿಲ್ಲ. ಪಾಲಕರು …

Read More »

ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆ: ಮುರುಂದ್ರ ಸ್ವಾಮೀಜಿ

ಸವದತ್ತಿ: ಸಮಾನತೆ, ಸಾಮರಸ್ಯ ಹಾಗೂ ಸಂಸ್ಕಾರಗಳ ಮಹತ್ವ ಸಾರಿದ ಜಗದ್ಗುರು ರೇಣುಕಾಚಾರ್ಯರ ತತ್ವಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಂದ್ರ ಸ್ವಾಮೀಜಿ ಹೇಳಿದರು. ತಾಲೂಕಿನ ತಹಸೀಲ್ದಾರ್​ ಕಚೇರಿಯಲ್ಲಿ ತಾಲೂಕಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೇಣುಕಾಚಾರ್ಯರ ಉಪದೇಶಗಳು ಶಾಂತಿ ಮತ್ತು ಸೌಹಾರ್ದ ಬಲಪಡಿಸುವಲ್ಲಿ ಮಾರ್ಗದರ್ಶಕವಾಗಿವೆ ಎಂದರು. ತಹಸೀಲ್ದಾರ್​ ಮಲ್ಲಿಕಾರ್ಜುನ ಹೆಗ್ಗನ್ನವರ, ಉದ್ಯಮಿ ಅಶ್ವತ್ಥ ವೈದ್ಯ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದ ಬೆಳವಣಿಗೆಗೆ ರೇಣುಕಾಚಾರ್ಯರ …

Read More »