Breaking News

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ  ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ ನಂತರ …

Read More »

ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

ಬೆಂಗಳೂರು: ಬಿಸಿಲಿನಿಂದ ಕಾದು ಕೆಂಡವಾಗಿದ್ದ ಬೆಂಗಳೂರಿನ  ಹಲವೆಡೆ ಬುಧವಾರ (ಇಂದು) ಸಂಜೆ ಆಲಿಕಲ್ಲು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ಬೆಂಗಳೂರಿನ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆಯು ಏಪ್ರಿಲ್ 29 ಮತ್ತು 30 ರಂದು ಬೆಂಗಳೂರು ಸೇರಿದಂತೆ ಕರ್ನಾಟಕ  ರಾಜ್ಯದ ವಿವಿಧೆಡೆ ಮಳೆಯಾಗುವುದಾಗಿ ಸೂಚನೆ ನೀಡಿತ್ತು. ಜೊತೆ ಆರೆಂಟ್ ಅಲರ್ಟ್ ಸಹ ಮಾಡಿತ್ತು. ಅಂತೆಯೇ ಇದೀಗ ಬೆಂಗಳೂರು ಸುತ್ತಮುತ್ತ ಮಳೆಯಾಗಿರುವುದರಿಂದ ವಾತಾವರಣ ತಂಪಾಗಿದೆ. ಮಂಗಳವಾರ …

Read More »

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

ಬೆಂಗಳೂರು: ವಿಧಾನಸಭೆ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ ಅಂತ ಸ್ಪೀಕರ್ ಯು.ಟಿ.ಖಾದರ್  ತಿಳಿಸಿದ್ದಾರೆ. ಯೋಗೇಶ್ ಗೌಡ ಹತ್ಯೆ ಕೇಸ್‌ನಲ್ಲಿ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ  ಅಪರಾಧಿ ಅಂತ ಆದೇಶಿಸಿದೆ. ಶಾಸಕ ಸ್ಥಾನ ರದ್ದು ಮಾಡದ ಬಗ್ಗೆ ಬಸವರಾಜ ಕೊರವರ ಮನವಿ ಸಲ್ಲಿಸಿದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವೊಬ್ಬ ಸದಸ್ಯನ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ. ಇದು ಎಲ್ಲಿಯಾದ್ರೂ ಉಂಟಾ? ವಿಧಾನಸಭೆ …

Read More »

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಪರೀಕ್ಷಾ ಸಿಬ್ಬಂದಿ ವರ್ತನೆಗೆ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ  ಖಂಡಿಸಿದೆ. ಪದೇ ಇದೇ ಜನಿವಾರ ತೆಗೆಸಿ, ಧಾರ್ಮಿಕ ಭಾವನೆಗಳ‌ ಮೇಲೆ ದಾಳಿ ನಡೆಸಲಾಗ್ತಿದೆ. ಸರ್ಕಾರ ಈ ವಿಚಾರವಾಗಿ ಪ್ರತ್ಯೇಕ ಕಾನೂನು ಜಾರಿ ಮಾಡಬೇಕೆಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಇನ್ನೆರೆಡು ದಿನದಲ್ಲಿ ಖುದ್ದು ಸಿಎಂ ರನ್ನ ಭೇಟಿ ಮಾಡಲಿದ್ದಾರೆ. …

Read More »

ಪಶ್ಚಿಮ ಬಂಗಾಳದಲ್ಲಿ ಅಂತಿಮ ಹಂತದ ‘ಮಹಾ ಸಂಗ್ರಾಮ’: ದೀದಿ vs ಮೋದಿ! ಯಾರಿಗೆ ಜಯ? 

​ಪಶ್ಚಿಮ ಬಂಗಾಳದ ಅಂತಿಮ ಹಂತದ ಮತದಾನ ಆರಂಭವಾಗಿದ್ದು, ಇಡೀ ದೇಶದ ಕಣ್ಣು ಈ ಕದನದ ಮೇಲಿದೆ. ಇದು ಕೇವಲ ಚುನಾವಣೆ ಮಾತ್ರವಲ್ಲ, ಬಿಜೆಪಿ (BJP) ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ‘ಮಾಡು ಇಲ್ಲವೇ ಮಡಿ’ ಹೋರಾಟ! ​ಏನಿದು ಈ ಹಂತದ ವಿಶೇಷತೆ? ​ಪ್ರಮುಖ ಕ್ಷೇತ್ರಗಳು: ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದ ಪ್ರಮುಖ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. ಇದು ದೀದಿ ಕೋಟೆ ಎಂದೇ ಪ್ರಸಿದ್ಧವಾಗಿದ್ದು, ಈ ಕೋಟೆಯನ್ನು ಭೇದಿಸಲು ಬಿಜೆಪಿ …

Read More »

ಭ್ರೂಣಲಿಂಗ ಪತ್ತೆ,ಹತ್ಯೆ ಪ್ರಕರಣ…ಮೂವರು ವೈದ್ಯರು ಅಂದರ್…

ಮಂಡ್ಯ,ಏ29:ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಜೈಲು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಬಂಧಿತರ ವಿರುದ್ಧ ಒಟ್ಟು 12 ಮೊಕದ್ದಮೆ ದಾಖಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಮಹಿಳಾ ವೈದ್ಯೆ ಸೇರಿದಂತೆ ಮೂವರು ವೈದ್ಯರು ಪೊಲೀಸರ ಅತಿಥಿಯಾಗಿದ್ದಾರೆ. ನಾಪತ್ತೆಯಾಗಿರುವ ಮತ್ತೋರ್ವ ಮಹಿಳಾ ವೈದ್ಯಗಾಗಿ ಜಾಲ ಬೀಸಿದ್ದಾರೆ. ಡಾ.ಪ್ರಿಯಾಂಕಾಗಾಗಿ ನಾಪತ್ತೆಯಾದ ವೈದ್ಯೆ. ಕೆ.ಆರ್.ಪೇಟೆಯ ಚೇತನ …

Read More »

ದಾವೂದ್ ಇಬ್ರಾಹಿಂನ ಆಪ್ತ ಸಲೀಂ ಡೋಲಾ ಈಗ IPS ವಶದಲ್ಲಿ! 

ಭಾರತದ ವಿರೋಧಿ ಶಕ್ತಿಗಳಿಗೆ ಮತ್ತು ಅಂತಾರಾಷ್ಟ್ರೀಯ ಡ್ರಗ್ ಮಾಫಿಯಾಗೆ ಭಾರತ ಸರ್ಕಾರ ಮತ್ತೊಂದು ಏಟು ಕೊಟ್ಟಿದೆ! ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಅತ್ಯಂತ ಆಪ್ತ ಸಹಚರ ಹಾಗೂ ಸಾವಿರಾರು ಕೋಟಿ ರೂಪಾಯಿಗಳ ಮಾದಕವಸ್ತು ಜಾಲದ ಸೂತ್ರಧಾರ ಸಲೀಂ ಡೋಲಾ (59) ಈಗ ಭಾರತದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಏನಿದು ‘ಆಪರೇಷನ್ ಗ್ಲೋಬಲ್ ಹಂಟ್’? ಟರ್ಕಿಯ ಇಸ್ತಾಂಬುಲ್‌ನಲ್ಲಿ ಅಡಗಿ ಕುಳಿತಿದ್ದ ಈತನನ್ನು ಭಾರತೀಯ ಗುಪ್ತಚರ ಸಂಸ್ಥೆಗಳು ಮತ್ತು ಟರ್ಕಿ ಪೊಲೀಸರು ಜಂಟಿ …

Read More »

22 ಬೌದ್ಧ ಸನ್ಯಾಸಿಗಳ ಲಗೇಜ್ನಲ್ಲಿ ಗಾಂಜಾ ಪತ್ತೆ

ಶ್ರೀ ಲಂಕಾ: ಕೊಲಂಬೊದ ಬಂಡಾರನಾಯಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್ನಿಂದ ಆಗಮಿಸುತ್ತಿದ್ದ 22 ಬೌದ್ಧ ಸನ್ಯಾಸಿಗಳ ಲಗೇಜ್ನಲ್ಲಿ ಸುಮಾರು 110 ಕೆಜಿಗೂ ಹೆಚ್ಚು ಗಾಂಜಾ (Sri Lanka Drug Bust) ಇರುವುದು ಪತ್ತೆಯಾಗಿದ್ದು, ಅವರನ್ನು ಶ್ರೀಲಂಕಾದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. ಘಟನೆ ಏನು? ವರದಿಗಳ ಪ್ರಕಾರ, ಈ ಸನ್ಯಾಸಿಗಳ ಗುಂಪು ಥೈಲ್ಯಾಂಡ್ನಿಂದ ಕೊಲೊಂಬಾಗೆ ಆಗಮಿಸಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ನಡೆಸಿದ ಪರಿಶೀಲನೆಯಲ್ಲಿ ಪ್ರತಿಯೊಬ್ಬ ಸನ್ಯಾಸಿಯ ಬ್ಯಾಗ್ನಲ್ಲಿ 5 ಕೆಜಿಗಿಂತ …

Read More »

ಆಸ್ತಿ ತೆರಿಗೆ ಪಾವತಿದಾರರಿಗೆ ಶೇಕಡ 5%ರಷ್ಟು ರಿಯಾಯಿತಿ ನೀಡಿ ಮುಖ್ಯ ಆಯುಕ್ತರಿಗೆ ಎಮ್.ಶಿವರಾಜು, ಅಬ್ದುಲ್ ವಾಜಿದ್ ಮನವಿ

ಜಿಬಿಎ ಕೇಂದ್ರ ಕಛೇರಿ: ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರನ್ನು ಆಡಳಿತ ಪಕ್ಷದ ಮಾಜಿ ನಾಯಕರಾದ ಎಮ್.ಶಿವರಾಜುರವರು, ವಿರೋಧ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜಿದ್ ರವರು ಭೇಟಿ ನೀಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ ಶೇ.5% ರಷ್ಟು ರಿಯಾಯತಿ ಅನ್ನು ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿದರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಪ್ರತಿ ವರ್ಷ ಏಪ್ರಿಲ್ ಮೇ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು …

Read More »

ಸಬ್ ಇನ್ಸ್ ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು

  ಪ್ರೀತಿಸಿ ಮದುವೆಯಾಗಿದ್ದ ಸಬ್ ಇನ್ಸ್ ಪೆಕ್ಟರ್ ಪತ್ನಿ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಈ ಘಟನೆ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು …

Read More »