Breaking News

ಕಾವೇರಿ 2.0 ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಅಸಲು ದಾವೆಯಲ್ಲಿ ಅಂಗೀಕರಿಸಿದ ರಾಜಿ ಅಂತಿಮ ತೀರ್ಪಿನ ನಿಯಮಗಳ ಪ್ರಕಾರ ತಮ್ಮ ಹೆಸರಿಗೆ ಖಾತಾ ವರ್ಗಾವಣೆ ಮಾಡುವಂತೆ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ಅವರಿಗೆ ನಿರ್ದೇಶನ …

Read More »

ದೆಹಲಿಗೆ ಸಿಎಂ, ಡಿಸಿಎಂ ಕರೆಸಿ ಮುಂದಿನ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ಕರೆಸಿ, ಹೇಗೆ ಮುಂದುವರೆಯಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ದೆಹಲಿಗೆ ತೆರಳುವ ಮುನ್ನ ಮಾತನಾಡಿದ ಅವರು, ”ನಾನು ದೆಹಲಿಗೆ ಹೋದ ಮೇಲೆ ಮಾತುಕತೆ ನಡೆಯಲಿದೆ. ಪ್ರಮುಖ ಮೂರ್ನಾಲ್ಕು ಜನರನ್ನು ಕರೆಸಿ ಮಾತನಾಡುತ್ತೇನೆ. ಹೇಗೆ ಮುಂದುವರೆಯಬೇಕೆಂದು ತೀರ್ಮಾನ ಮಾಡ್ತೇನೆ. ಸಿಎಂ, ಡಿಸಿಎಂ ಅವರೆಲ್ಲರನ್ನು ಕರೆಸಿಯೇ ಮಾತನಾಡ್ತೇನೆ. ಎಲ್ಲವನ್ನೂ ಸೆಟಲ್ ಮಾಡುತ್ತೇವೆ” ಎಂದರು. …

Read More »

ಶಿವಶಂಕರಪ್ಪರಿಗೆ ಮುಂದುವರಿದ ಚಿಕಿತ್ಸೆ, ಕೆಲವೇ ದಿನಗಳಲ್ಲಿ ಡಿಸ್ಚಾರ್ಜ್​: ವದಂತಿ ಬಗ್ಗೆ ಪುತ್ರ ಆಕ್ರೋಶ

ದಾವಣಗೆರೆ: ಹಿರಿಯ ಶಾಸಕ ಹಾಗೂ ಅಖಿಲ ಭಾರತೀಯ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅನಾರೋಗ್ಯ ವಿಚಾರವಾಗಿ‌ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಶಾಮನೂರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಿಡಿಗೇಡಿಗಳು ಶಾಮನೂರು ಶಿವಶಂಕರಪ್ಪ ಪೋಟೋ ಹಾಕಿ ಓಂ ಶಾಂತಿ ಎಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ.‌ ಇದರ ಬಗ್ಗೆ ಶಾಮನೂರು ಶಿವಶಂಕರಪ್ಪ ದ್ವಿತೀಯ ಪುತ್ರ ಎಸ್​.ಎಸ್. ಗಣೇಶ್ ಅವರು …

Read More »

ರೈತರಿಗೆ ಹೆಚ್ಚುವರಿಯಾಗಿ ₹1,033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ

ಬೆಂಗಳೂರು: ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 1,033.60 ಕೋಟಿ ರೂ. ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಅವರು ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1,033.60 ಕೋಟಿ …

Read More »

ಲಿವ್‌-ಇನ್‌ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್‌

ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್‌–ಇನ್‌(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್‌ ಇಂದು ಮಹತ್ವದ ಆದೇಶ ನೀಡಿತು. ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್‌.ಲೋಕೇಶ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಪೀಠ ಈ …

Read More »

ಕಬಡ್ಡಿ ವಿಶ್ವಕಪ್ ಗೆದ್ದ ತಂಡದ ಧನಲಕ್ಷ್ಮಿ, ಬ್ಯಾಡ್ಮಿಂಟನ್​ ಬೆಳ್ಳಿ ಸಾಧಕಿ ಲಕ್ಷ್ಯ ರಾಜೇಶ್​​ಗೆ ಸಿಎಂ ಅಭಿನಂದನೆ

ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಇತ್ತೀಚೆಗೆ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟಕ್ಕೇರಿದ ಭಾರತ ತಂಡದ ಭಾಗವಾಗಿದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೀನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ಸ್​​ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಆಟಗಾರ್ತಿ ಲಕ್ಷ್ಯ ರಾಜೇಶ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನಿಸಿದರು. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರ ನೇತೃತ್ವದಲ್ಲಿ ಇಬ್ಬರೂ ಕ್ರೀಡಾಪಟುಗಳು ಇಂದು ಸಿಎಂರನ್ನು ಅವರ ಕಚೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ …

Read More »

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ. ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು …

Read More »

ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ

ಬೆಳಗಾವಿ ಜಿಲ್ಲೆ ಎಸ್.ಪಿ ಅವರಿಗೆ ಮನವಿ ದಿನನಿತ್ಯ NH4 ಪುಣೆ ಬೆಂಗಳೂರು ಹೈವೇ ದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಇದ್ದು ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಬೆಳಗಾವಿಗೆ ಪ್ರಯಾಣಿಕರು ಸಂಚರಿಸುತ್ತಿದ್ದು ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ ನೀಡುತಿದ್ದಾರೆ ಈ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಪೊಲೀಸ್ ನೋಡಿ ಹೈವೇ ಯಲ್ಲಿ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ತೊಂದರೆ ಆಗುತ್ತಿದ್ದೆ ಆದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು …

Read More »

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಸಿಎಂ ಶುಭ ಹಾರೈಕೆ; ಸರ್ಕಾರಿ ಉದ್ಯೋಗ ಘೋಷಣೆ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ, ಅಭಿನಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ರೂ. ನಗದು ಬಹುಮಾನದ ಜೊತೆಗೆ, ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತಿಯೊಬ್ಬ ಆಟಗಾರ್ತಿಯರನ್ನು ವೈಯಕ್ತಿಕವಾಗಿ ಅಭಿನಂದಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಮಹತ್ವದ ಘೋಷಣೆ ಮಾಡಿದರು. ಹಾಗೆಯೇ, ಭಾರತ ತಂಡವನ್ನು ಪ್ರತಿ‌ನಿಧಿಸಿದ ಇತರ ರಾಜ್ಯಗಳ ಆಟಗಾರ್ತಿಯರಿಗೆ ತಲಾ 2 ಲಕ್ಷ …

Read More »

ಡಿಕೆಶಿ-ಸತೀಶ್ ಜಾರಕಿಹೊಳಿ ತಡರಾತ್ರಿ ಭೇಟಿ ಕುತೂಹಲ; ಸತೀಶ್ ಜಾರಕಿಹೊಳಿ ಬೆಂಬಲ ಕೋರಿದ ಡಿಕೆಶಿ?

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಂಗಳವಾರ ತಡರಾತ್ರಿಯ ಭೇಟಿ ರಾಜ್ಯ ಪವರ್ ಫೈಟ್​​ಗೆ ಮತ್ತಷ್ಟು ತಿರುವು ನೀಡಿದೆ. ಖಾಸಗಿ ಹೊಟೇಲ್​ನಲ್ಲಿ ಸತೀಶ್ ಜಾರಕಿಹೊಳಿ, ಡಿಕೆಶಿ ನಡುವೆ ಮಾತುಕತೆ ನಡೆದಿದೆ. ಸತೀಶ್ ಜಾರಕಿಹೊಳಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದೀರ್ಘ ಚರ್ಚೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಅವರ ಮನವೊಲಿಸುವ ಜೊತೆಗೆ ತಮ್ಮ ಸಹಕಾರ ಬೇಕೆಂದು ಮನವಿ …

Read More »