Breaking News

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಗೋಪಾಲಯ್ಯ, ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು. ಉಗ್ರರಿಗೆ, ರೇಪಿಸ್ಟ್​ಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು …

Read More »

ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ: ಕುಮಾರಸ್ವಾಮಿ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅತ್ಯಾಚಾರಿಗಳು ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಆರೋಪಿಸಿದರು. ಇಂದು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ: ಅಧಿಕೃತ ಘೋಷಣೆ ಮಾತ್ರ ಬಾಕಿ

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್​​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ರಾಜು ಕಾಗೆ ಅವರನ್ನು ಜಾರಕಿಹೊಳಿ ಬಣ ಆಯ್ಕೆ ಮಾಡಿದ್ದು, ಈ ಇಬ್ಬರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಖಾಸಗಿ ಹೋಟೆಲ್​ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 13 ನಿರ್ದೇಶಕರು ಸಭೆ ಸೇರಿದ್ದರು. ಈ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, …

Read More »

ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!

ಬೆಂಗಳೂರು, ನವೆಂಬರ್ 10: ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ (Shakti Scheme) ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು ಬಾರಿ ಉಚಿತವಾಗಿ ಸಂಚಾರ ಮಾಡಿದ್ದಾರೆ. ಆದರೆ ಇಂತಹ ಯೋಜನೆ ಬಗ್ಗೆ ಕೆಲ ಸಾರಿಗೆ ನೌಕರರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಯಾಣಿಕರಿಂದ ಕೂಡ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಈ ಹಿನ್ನೆಲೆ ಸಾರಿಗೆ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ?ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ…

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ; ಸಚಿವ ಸತೀಶ್ ಜಾರಕಿಹೊಳಿ ನಮ್ಮ ಜೊತೆ ಇರುವವರ ಕೈ ಬಿಡಲ್ಲ… ನಾವು ನುಡಿದಂತೆ ನಡೆದಿದ್ದೇವೆ…ಲಿಂಗಾಯಿತರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಿದ್ದೇವೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಅಣ್ಣಾಸಾಹೇಬ್ ಜೊಲ್ಲೆ ಬೆಸ್ಟ್ ಎಕ್ನಾಮಿಸ್ಟ್ ತಜ್ಞ… 5 ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚಿತ್ರಣ ಬದಲಾಗಲಿದೆ

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ! ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2025-26 ರ 14 …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್ ಲೈಫ್

ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …

Read More »

ಪದವಿ ಮುಗಿದ ನಂತರವೇ ನಿಜವಾದ ಜೀವನ ಆರಂಭ

ಮೈಸೂರು: ಶಿಕ್ಷಣ ಮುಗಿದ ನಂತರ ಜೀವನ ಮುಗಿದಂತಾಗುವುದಿಲ್ಲ. ಅದು ನಿಮ್ಮ ಹೊಸ ಪ್ರಯಾಣದ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ನೂತನ ಪದವೀಧರರಿಗೆ ಕಿವಿಮಾತು ಹೇಳಿದರು. ನಗರದ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿ ನಡೆದ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 16ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಿಮ್ಮ ಗುರಿಗಳು, ಕನಸುಗಳು ಮತ್ತು ಭವಿಷ್ಯವನ್ನು ಉಜ್ವಲಗೊಳಿಸಲು ನೀವು ಪ್ರಯತ್ನಿಸಬೇಕು. ಎಲ್ಲರೂ ಯಶಸ್ವಿಯಾಗಲು ಸಾಧ್ಯವಿದೆ ಎಂದು ಸಲಹೆ …

Read More »

ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…

ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …

Read More »

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …

Read More »