Breaking News

ಪತ್ನಿಯ ಖಾಸಗಿ ವಿಡಿಯೋ ನೋಡಿ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್: ಡೆತ್ ನೋಟ್‌ನಲ್ಲಿದೆ ಬೆಚ್ಚಿ ಬೀಳಿಸುವ ರಹಸ್ಯ.!!!

ಹೈದರಾಬಾದ್‌ನಲ್ಲಿ ನಡೆದ ಸಾಫ್ಟ್‌ವೇರ್ ಇಂಜಿನಿಯರ್ ಸೀತಾರಾಂ ಅವರ ಆತ್ಮಹತ್ಯೆ ಪ್ರಕರಣವು ದಾಂಪತ್ಯ ದ್ರೋಹದ ಕರಾಳ ಮುಖವನ್ನು ಅನಾವರಣಗೊಳಿಸಿದೆ. ಪತ್ನಿಯ ಅಕ್ರಮ ಸಂಬಂಧಗಳಿಂದ ಬೇಸತ್ತು ಆತ ಕೆರೆಗೆ ಜಿಗಿದು ಪ್ರಾಣಬಿಟ್ಟಿದ್ದು, ಇದೀಗ ಪ್ರಕರಣದ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಘಟನೆಯ ಮುಖ್ಯಾಂಶಗಳು: ಪತ್ನಿಯ ದ್ರೋಹ: 2018ರಲ್ಲಿ ವಿವಾಹವಾಗಿದ್ದ ಸೀತಾರಾಂ ಮತ್ತು ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ರೇಣುಕಾ ಮೂವರು ಬೇರೆ ಬೇರೆ ವ್ಯಕ್ತಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು …

Read More »

ಮನೆಗಳ್ಳರನ್ನು ಬಂಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ ನಗರದ ಅನಗೋಳದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ತಿಲಕವಾಡಿ ಪೊಲೀಸರು ಬಂಧಿಸಿದ್ದಾರೆ. ಉಜ್ವಲಾ ರವಿ ಕಮ್ಮಾರ (40) ಹಾಗೂ ಶಿವಾ ಶಂಕರ ಅಪ್ಪಯನವರ, (30) ಆರೋಪಿಗಳಿಂದ ಒಟ್ಟು ಒಟ್ಟು 16,57,350 ರೂ ಮೌಲ್ಯದ 110.49 ಗ್ರಾಂ ಬಂಗಾರದ ಆಭರಣಗಳು ಜಪ್ತ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ. ತನಿಖಾ ತಂಡದಲ್ಲಿ ತಿಲಕವಾಡಿ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ ಪೂಜೇರಿ, ಪಿಎಸ್‌ಐ ವಿಶ್ವನಾಥ ಘಂಟಾಮಠ (ಕಾ&ಸು), ಪ್ರಭಾಕರ ಡೊಳ್ಳಿ ಪಿಎಸ್‌ಐ (ಅ&ವಿ), ಸಿಬ್ಬಂದಿಗಳಾದ …

Read More »

ಬೆಳಗಾವಿಯಲ್ಲಿ ಕಾರ್ಮಿಕರ ದಿನದಂತೆ ಕಾರ್ಮಿಕ ಆಕ್ರೋಶ: ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಸಿಐಟಿಯು ಪ್ರತಿಭಟನೆ

ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಬೆಳಗಾವಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದ ಸಾವಿರಾರು ಕಾರ್ಮಿಕರು, ಹಕ್ಕುಗಳ ರಕ್ಷಣೆಗಾಗಿ ಬೀದಿಗಿಳಿದು ಹೋರಾಟ ನಡೆಸಿದರು. ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಕನ್ನಡ ಸಾಹಿತ್ಯ ಭವನದವರೆಗೆ ಇಂದು ಸಿಐಟಿಯು ವತಿಯಿಂದ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಕಳೆದ 12 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರ, ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ …

Read More »

ಬಿಜೆಪಿ ಬಿಟ್ಟು ಬೇರೆ ಪಕ್ಷಗಳ ಆಡಳಿತವಿರುವ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಆಗುತ್ತಿಲ್ಲ

ಬಿಜೆಪಿ ಬಿಟ್ಟು ಬೇರೆ ಪಕ್ಷಗಳ ಆಡಳಿತವಿರುವ ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಆಗುತ್ತಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ ಕಾರ್ಮಿಕ ಕಲ್ಯಾಣ ನಿಧಿ ಸಹ ಬಳಕೆ ಆಗುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ ಕಲ್ಯಾಣ ಸೆಸ್ ಸರಿಯಾಗಿ ಬಳಕೆಯಾಗ್ತಿಲ್ಲಾ. ಕರ್ನಾಟಕದಲ್ಲಿ ಬರೀ ಮೆಡಿಕಲ್ ಕ್ಯಾಂಪ್, ಕಿಟ್ ಹಂಚಿಕೆ ಮಾತ್ರ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕಾರ್ಮಿಕ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರು. ಚಿಕ್ಕಬಳ್ಳಾಪುರದಲ್ಲಿ …

Read More »

ಜನಸಾಮಾನ್ಯರಿಗೆ ತಲೆನೋವಾಗಿದ್ದ ರೌಡಿಶೀಟರ್ ಗಡಿಪಾರು

ಯರಗಟ್ಟಿ : ಸಮೀಪದ ನುಗ್ಗಾನಟ್ಟಿ ಗ್ರಾಮದ ರೌಡಿಶೀಟರ್ ನೀಲಕಂಠ ಮುದಕಪ್ಪ ಮನವಾಡಕರ (26) ಎಂಬಾತನನ್ನು 6 ತಿಂಗಳ ಕಾಲ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಮಾನ್ಯ ಪೊಲೀಸ್ ಅಧೀಕ್ಷಕರು ಬೆಳಗಾವಿ ಜಿಲ್ಲೆ ಮತ್ತು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಬೆಳಗಾವಿ ಆದೇಶ ಹೊರಡಿಸಿದ್ದಾರೆ. ಆರೋಪಿತನು ಮಾಡಮಗೇರಿ ಗ್ರಾಮದ ಒಬ್ಬ ಮುಗ್ಧ ದಲಿತ ಮಹಿಳೆಗೆ ಹೆದರಿಸಿ ಜಮೀನು ಕಬಳಿಸಲು ಯತ್ನ, ನುಗ್ಗಾನಟ್ಟಿ ಗ್ರಾಮದ ಅಮಾಯಕ ಯುವಕ ರಾಜು ಮುದ್ದನ್ನವರನನ್ನು ರೌಡಿ ಸಹಚರರೊಂದಿಗೆ ಸೇರಿ …

Read More »

20ಕ್ಕೂ_ಹೆಚ್ಚು_ಮಹಿಳೆಯರ_ಅಶ್ಲೀಲ_ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ಬೆಂಗಳೂರಲ್ಲಿ ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್..

ಬೆಂಗಳೂರಲ್ಲಿ ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆರ್ ಆರ್ ನಗರ ಪೊಲೀಸ್ರಿಂದ ಆರೋಪಿ ಚಂದ್ರೇಗೌಡನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊಲೀಸ್, ರಿಪೋರ್ಟರ್, ವಕೀಲ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಅಲ್ಲದೇ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಚಂದ್ರೆಗೌಡ ನನಗೆ ಡಿವೋರ್ಸ್ …

Read More »

ತುರಮುರಿ ಕಸದ ಡಿಪೋಗೆ ಶಾಶ್ವತ ಪರಿಹಾರ ಹಾಗೂ ಬೆಳಗಾವಿಯಲ್ಲಿ ಸೆಮಿಕಂಡಕ್ಟರ್ ಪ್ಲಾಂಟ್ ಸ್ಥಾಪನೆಗೆ ಆಗ್ರಹ

ಬೆಳಗಾವಿಯ ತುರಮುರಿ ಕಸದ ಡಿಪೋದಿಂದ ಹರಡುತ್ತಿರುವ ಮಾಲಿನ್ಯ ತಡೆಗೆ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು ಹಾಗೂ ನಗರದ ಕೈಗಾರಿಕಾ ಅಭಿವೃದ್ಧಿಗೆ ಸೆಮಿಕಂಡಕ್ಟರ್ ಉತ್ಪಾದನಾ ಘಟಕ ಸ್ಥಾಪಿಸಬೇಕು ಎಂದು ಸೋಶಿಯಲ್ ಜಸ್ಟಿಸ್ ಫೋರಂ ಜಿಲ್ಲಾಡಳಿತಕ್ಕೆ ಮಹತ್ವದ ಮನವಿ ಸಲ್ಲಿಸಿದೆ. ಬೆಳಗಾವಿ ತಾಲೂಕಿನ ತುರಮುರಿ ಕಸದ ಡಿಪೋದಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದ್ದು, ಮಣ್ಣು ಮತ್ತು ನೀರು ಕಲುಷಿತಗೊಂಡು ನಾಗರಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ …

Read More »

ಧಾರವಾಡ ವಿದ್ಯಾರ್ಥಿ ಸುಸೈಡ್ ಪ್ರಕರಣ…ವಿದ್ಯಾಗಿರಿ ಇನಸ್ಪೆಕ್ಟರ್ ತಹಶಿಲ್ದಾರ ಸಸ್ಪೆಂಡ್

ಧಾರವಾಡ:-ಧಾರವಾಡದಲ್ಲಿ ತಂದೆ ಇಲ್ಲದ ತಬ್ಬಲಿ ವಿದ್ಯಾರ್ಥಿ ಸುಸೈಡ್ ಪ್ರಕರಣಕ್ಕೆ ಮತ್ತೊಂದು ಬಲಿ..ಧಾರವಾಡ ವಿದ್ಯಾಗಿರಿ ಇನಸ್ಪೆಕ್ಟರ್ ರಫೀಕ್ ತಹಶೀಲ್ದಾರ ಸಸ್ಪೆಂಡ್ ಆಗಿದ್ದಾರೆ.. ಕೆಲ ಘಂಟೆಗಳ ಹಿಂದೆ ಪೋಲೀಸ ಇಲಾಖೆಯ ವಿರುದ್ಧ ಹರಿಹಾಯ್ದಿದ್ದ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಒಂದೆರಡು ದಿನದಲ್ಲಿ ಕಮೀಷನರ್ ಎನ್ ಶಶಿಕುಮಾರ್ ಮೇಲೆ ಕ್ರಮಕೈಕೊಳ್ಳಬೇಕು.ಇಲ್ಲದಿದ್ದರೆ ಬೀದಿಗಿಳಿಯುವ ಎಚ್ಚರಿಕೆ ನೀಡಿದ ಬೆನ್ನಲ್ಲೆ ಈಗ ಇನಸ್ಪೆಕ್ಟರ್ ತಹಶೀಲ್ದಾರ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಎನ್ ಶಶಿಕುಮಾರ ಹೊರಡಿಸಿದ್ದಾರೆ. ಸುಸೈಡ್ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ತಾವು ಸ್ಪರ್ಧಿಸಿರುವ ಭವಾನಿಪುರಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ತಂಗಿದ್ದರು. ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಮತ್ತು ಅವುಗಳ ಟ್ಯಾಂಪರಿಂಗ್‌ಗೆ  ಸಂಚು …

Read More »

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ (Rain) ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲೂಕಿನ, ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಬಿರುಗಾಳಿಯ ಲೋಕೇಶ್, ಪರಮೇಶ್, ನಾಗರಾಜ್ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ಸರ್ವನಾಶವಾಗಿವೆ. ಫಸಲಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ಬಾಳೆಗೊನೆ ಕಟಾವು ಮಾಡಿ ಮಾರಾಟ ಮಾಡಬೇಕಿತ್ತು. ಆದರೆ ಭಾರೀ ಮಳೆ, ಗಾಳಿಗೆ ಬಾಳೆಗೊನೆ ಸಹಿತ ಗಿಡ …

Read More »