Breaking News

ಸ್ವಯಂ ಪ್ರೇರಿತವಾಗಿ ನಿವೃತ್ತಿ ಪಡೆದ ಪೊಲೀಸ್ ಹವಾಲ್ದಾರ್

ಪೊಲೀಸ್ ಇಲಾಖೆಯಲ್ಲಿ 20 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಹವಾಲ್ದಾರ್ ಒಬ್ಬರು ಸ್ವಯಂ ಪ್ರೇರಿತವಾಗಿ ನಿವೃತ್ತಿ ಪಡೆಯುತ್ತಿದ್ದರು. ಅವರಿಗೆ ಸಾಕಷ್ಟು ಸಮಯ ತಿಳಿಸಿ ಹೇಳಿದ ನಂತರ ಎಸ್ಪಿ ಕೇಳಿದರು, “ಈ ಕೆಲಸವು ನಿಮಗೆ ಎಲ್ಲವನ್ನು ಕೊಟ್ಟಿದೇ, ಆದರೂ ಏಕೆ ಸ್ವಯಂ ನಿವೃತ್ತಿ ಪಡೆಯುತ್ತಿದ್ದೀರಿ?” ಇದಕ್ಕೆ, ಹವಾಲ್ದಾರ್ ಸುಂದರವಾದ ಮತ್ತು ಮಾರ್ಮಿಕವಾಗಿ ಹೃದಯಸ್ಪರ್ಶಿ ಉತ್ತರವನ್ನು ನೀಡಿದರು: “ಸರ್, ನೀವು ನಿಮ್ಮ ಮುಂದೆ ಖಾಲಿ ಕುರ್ಚಿಗಳಿದ್ದರೂ ಸಹ.” ನನಗೆ ಎರಡು ಗಂಟೆಗಳ ಕಾಲ …

Read More »

ಮಹಿಳಾ ಮೀಸಲಾತಿ ಜಾರಿಗೊಳಿಸಿ: ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ:ಕೇಂದ್ರದಲ್ಲಿ ಬಿಜೆಪಿ ಸರ್ಕಾರ ನಾರಿಶಕ್ತಿ ವಂದನ್ ಮಸೂದೆಯ ಬದಲಾಗಿ 2023ರ ಮಹಿಳಾ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗ್ರಹಿಸಿದರು. ಚಿಕ್ಕೋಡಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ರಾಜೀವ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ತರಲಾಗಿತ್ತು. ಕಾಂಗ್ರೆಸ್ ಮಹಿಳಾ ವಿರೋಧಿ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು …

Read More »

ಪ್ರೇಕ್ಷಕರನ್ನು ನಕ್ಕು ನಗಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ

ಬೆಳಗಾವಿ : ಇಲ್ಲಿಯ ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆಯ ಕಲಾವಿದರು ಪ್ರಸ್ತುತಪಡಿಸಿದ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕ ಪ್ರದರ್ಶನದುದ್ದಕ್ಕೂ ಪ್ರೇಕ್ಷಕರನ್ನು ನಕ್ಕು ನಗಿಸುವ ಮೂಲಕ ಯಶಸ್ವಿ ಪ್ರಯೋಗವೆನಿಸಿತು. ಕನ್ನಡ ಭವನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಕಿಕ್ಕಿರಿದು ಪ್ರೇಕ್ಷಕರು ತುಂಬಿದ್ದರು. ಸುಮಾರು 50 ನಿಮಿಷಗಳ ನಾಟಕ ಆರಂಭದಿಂದ ಅಂತ್ಯದವರೆಗೂ ನಿರಂತರ ನಗಿಸುವ ಮೂಲಕ ಪ್ರೇಕ್ಷಕರನ್ನು ಕದಲದಂತೆ ಮಾಡಿತು. ಎಂ. ಎಸ್. ನರಸಿಂಹಮೂರ್ತಿ ರಚಿಸಿರುವ ಈ ನಾಟಕವನ್ನು ಶರಣಗೌಡ ಪಾಟೀಲ ಅವರು ನಿಿಿರ್ದೇಶಿಸಿದ್ದಲ್ಲದೆ, …

Read More »

ಹುಲಿಗೆಮ್ಮ ದೇವಿಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ

ಕೊಪ್ಪಳ :-35 ದಿನಗಳಲ್ಲಿ ಹುಂಡಿಯಲ್ಲಿ ಸಂಗ್ರಹಣೆಯಾದಂತಹ ಒಟ್ಟು ಮೊತ್ತ 81,96,760/- (ಎಂಬತ್ತೊಂದು ಲಕ್ಷದ ತೊಂಬತ್ತಾರು ಸಾವಿರದ ಏಳುನೂರ ಅರವತ್ತು ರೂಪಾಯಿಗಳು ಮಾತ್ರ)… ಕಚ್ಚಾ ಬಂಗಾರ 169 ಗ್ರಾಂ ಮತ್ತು ಬೆಳ್ಳಿ 7 ಕೆಜಿ ಹುಂಡಿಯಲ್ಲಿ ಸಂಗ್ರಹಣೆಯಾಗಿದೆ. ಹುಂಡಿ ಎಣಿಕೆಯ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯದರ್ಶಿಗಳಾದಂತಹ M H ಪ್ರಕಾಶ್ ರಾವ್, ಉಪ ಕಾರ್ಯದರ್ಶಿಯಾದಂತಹ ಬಸವರಾಜ್ J, ವಿಜಯ್ ಕುಮಾರ್ ಶೆಟ್ಟರ್, ಈರಣ್ಣ E, ಹನುಮಂತ ಗಿಡ್ಡಾಲಿ, ಜಗನ್ನಾಥ …

Read More »

ಕುಡಿಯುವ ನೀರಿಗೆ ಯುವಕರ ಆಕ್ರೋಶ

ಕೊಪ್ಪಳ : ಜಿಲ್ಲೆಯ ಕಾರಟಗಿ ಕನಗಿರಿ ಕ್ಷೇತ್ರದ ಸಚಿವರಾದ ಶಿವರಾಜ್ ತಂಗಡಿಯವರು ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಭೂಮಿ ಪೂಜೆ ಮಾಡುತ್ತಾರೆ, ಆದರೆ ಇಲ್ಲೊಂದು ಸತ್ಯದ ಕಥೆಗೆ ಜನರಿಗೆ ಕುಡಿಯಲು ನೀರಿಲ್ಲದಂತಾಗಿದೆ, ಸಚಿವರ ಬೆಂಬಲಿಗರು ಅಧ್ಯಕ್ಷ ಸ್ಥಾನ ನಿರ್ವಹಿಸಿದರು ಹಾಗೂ ಅದೇ ಬೋವಿ ಸಮಾಜದ ಅಧ್ಯಕ್ಷರು ಇದ್ದರೂ ಕುಡಿಯಲು ನೀರಿಲ್ಲ, ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಿಂಗನಾಳ ಗ್ರಾಮದಲ್ಲಿ ಸುಮಾರು 5 ವರ್ಷಗಳಿಂದ ಫಿಲ್ಟರ್ ನೀರಿನ ಮಿಷನ್ …

Read More »

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

ಬೆಂಗಳೂರು: ಬೇಸಿಗೆಗೆ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ, ಹಲವು ಅವಘಡಗಳ ಜೊತೆ 10 ಜನರ ಪ್ರಾಣವನ್ನು ತೆಗೆದಿದೆ. ಒಂದೇ ಜಾಗದಲ್ಲಿ 7 ಜನ ಗೋಡೆ ಕುಸಿದು ಅಸುನೀಗಿದ್ರೆ, ಉಳಿದ ಮೂವರು ಪ್ರತ್ಯೇಕ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಬ್ಬರಿಸಿದ್ದ ಬಿಸಿಲಿನ ಬೇಗೆಗೆ ವರುಣ  ತಂಪೆರೆದ ಅಂತ ನಿಟ್ಟುಸಿರು ಬಿಡುವಷ್ಟರಲ್ಲೇ, ಹಲವು ಮನೆಗಳ ನಂದಾದೀಪವೇ ಆರಿಹೋಗಿವೆ. ಅರ್ಧ ಗಂಟೆ ಸುರಿದ ಮಳೆಗೆ ನಗರದಲ್ಲಿ ಪ್ರತ್ಯೇಕ ಘಟನೆಗಳಲ್ಲಿ 10 ಜನ …

Read More »

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಶಿವಾಜಿನಗರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿರುವ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 7 ಜನರ ಸಾವಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿದು ಸಂಭವಿಸಿದ ದುರ್ಘಟನೆ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೃತರ …

Read More »

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

ದಾವಣಗೆರೆ: ಮಾನಸಿಕ ಅಸ್ವಸ್ಥ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ದಂಪತಿಗೆ 3 ವರ್ಷ ಜೈಲು, 15 ಸಾವಿರ ದಂಡ ವಿಧಿಸಿ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ದಾವಣಗೆರೆ ಚನ್ನಗಿರಿ ತಾಲ್ಲೂಕಿನ ತೌಸಿಫ್ ಅಹಮ್ಮದ್ 7 ವರ್ಷ ಕಾರಾಗೃಹ ಶಿಕ್ಷೆಗೆ ಗುರಿಯಾದ ಅಪರಾಧಿ. ಸೈಯ್ಯದ್ ಅಬ್ಬು ಸಾಲೇಹ ಹಾಗೂ ಅಮೀನ್ ಖಾನಂ …

Read More »

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

ಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ ತೊಯ್ದು ತೊಪ್ಪೆಯಾಗಿದೆ. ಬೆಂಗಳೂರಿನ ಹಲವೆಡೆ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ವಿಧಾನಸೌಧ, ಪೊಲೀಸ್ ಕಮಿಷನರ್ ಕಚೇರಿ, ಇನ್‌ಫೆಂಟ್ರಿ ರೋಡ್, ಲ್ಯಾವೆಲ್ಲೆ ರೋಡ್, ಶಿವಾಜಿನಗರ, ರಿಚ್‌ಮಂಡ್ ಟೌನ್, ಅವೆನ್ಯೂ ರೋಡ್ ಸುತ್ತಮುತ್ತ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಸುಮ್ಮನಹಳ್ಳಿ ಫ್ಲೈ ಓವರ್ ಮೇಲೆ ಸರಣಿ ಅಪಘಾತವಾಗಿದೆ. ಕಾರು-ಲಾರಿ ಸೇರಿದಂತೆ 7-8 ವಾಹನಗಳ ಮಧ್ಯೆ ಅಪಘಾತವಾಗಿದ್ದು, …

Read More »

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

ಬೆಂಗಳೂರು: ಕಾಂಪೌಂಡ್ ಕುಸಿದು  ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಬೇಸರ ವ್ಯಕ್ತಪಡಿಸಿದರು. ಕಾಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ  ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದರು. ನಂತರ ಮಾಧ್ಯಮಗಳೊಂದಿಗೆ ಮಾತನಾಟಡಿದ ಅವರು, ಏಳು ಜನ ಮೃತಪಟ್ಟಿದ್ದು, …

Read More »