Breaking News

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

ಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಇರಾನ್ ತನ್ನ ತಾತ್ಕಾಲಿಕ ಸರ್ವೋಚ್ಚ ನಾಯಕನನ್ನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ  ಅವರನ್ನು ಘೋಷಿಸಿದೆ ಎಂದು ಇರಾನ್‌ನ ಇಸ್ನಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇರಾನ್‌ನ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಅರಾಫಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು. ಇವರು ಗಾರ್ಡಿಯನ್ ಕೌನ್ಸಿಲ್‌ನ …

Read More »

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿ) ಮತ್ತು ಪದವೀಧರ ಶಾಲಾ ಶಿಕ್ಷಕರು (6-8ನೇ ತರಗತಿ) ವೃಂದದಿಂದ ಅನುಕ್ರಮವಾಗಿ 2:1 ಅನುಪಾತದಲ್ಲಿ ಮುಂಬಡ್ತಿ ನೀಡುವ ಮೂಲಕ ಪ್ರತಿ ಮೂರನೇ ರಿಕ್ತ ಸ್ಥಾನವನ್ನು ತುಂಬುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ …

Read More »

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ನವದೆಹಲಿ: ಇಸ್ರೇಲ್-ಇರಾನ್ ಯುದ್ಧ  ಹಿನ್ನೆಲೆ ಮಧ್ಯಪ್ರಾಚ್ಯ ಸಂಘರ್ಷದ ಕುರಿತು ಚರ್ಚಿಸಲು ಇಂದು ರಾತ್ರಿ ಪ್ರಧಾನಿ ಮೋದಿ  ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ ನಡೆಯಲಿದೆ. ಸಭೆ ರಾತ್ರಿ 10 ಗಂಟೆಗೆ ನಡೆಯಲಿದೆ. ಎರಡು ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ಇಂದು ರಾತ್ರಿ 9:30 ರ ಸುಮಾರಿಗೆ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ಬಳಿಕ ರಾತ್ರಿ 10 ಗಂಟೆಗೆ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇ ಇಸ್ರೇಲ್ ಭಾನುವಾರವೂ ಇರಾನ್ …

Read More »

ವೈಮಾನಿಕ ನಿರ್ಬಂಧ ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಬೆಳಗಾವಿ: ​​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು  ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ  0831-2407290,ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ  080-22340676, …

Read More »

ಬೀದರ್: ಶೀಲ ಶಂಕಿಸಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

ಬೀದರ್: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಕಿಶನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಇಡೀ ರಾತ್ರಿ ಕಿಶನ್ ತನ್ನ ಪತ್ನಿ ಅಶ್ವಿನಿಯೊಂದಿಗೆ ಶೀಲ ಶಂಕೆಯ ವಿಚಾರವಾಗಿ ಜಗಳವಾಡಿದ್ದನು. ಪತ್ನಿ ಇನ್ನೊಬ್ಬ …

Read More »

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​

ಗದಗ: ಕರೆಯಲ್ಲಿ ಈಜಲು ತೆರಳಿ 9ನೇ ತರಗತಿಯ ಮೂವರ ಪೈಕಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಡಾ. ಅಂಬೇಡ್ಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು …

Read More »

ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

ಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಬದಲಾದ ವೇಳಾಪಟ್ಟಿ ಪ್ರಕಟಿಸಲಾಗಿದೆ. ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಜಾತ್ರಾ ಮಹೋತ್ಸವದ ದಿನವೇ ಚಂದ್ರಗ್ರಹಣ ಇರುವುದರಿಂದ ದೇವಸ್ಥಾನದ ಮಹಾದ್ವಾರ ಮಧ್ಯಾಹ್ನ 1ರಿಂದ ರಾತ್ರಿ 8:30ರವರೆಗೆ ಬಂದ್ ಆಗಲಿದೆ. ಬೆಳಿಗ್ಗೆ 7:30ರಿಂದ 10:30ರೊಳಗೆ ಪೂಜೆ ನೆರವೇರಿಸಲು ಸೂಚನೆ ನೀಡಲಾಗಿದೆ. ಮಾರ್ಚ್ 3ರ ಬೆಳಗಿನ ಜಾವ 4 …

Read More »

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮರ್ಪಣೆ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು. ಶಿಕ್ಷಕರು ದೇಶದ ಭವಿಷ್ಯ ರೂಪಿಸುವವರು. ಒಂದು ಕಾಲದಲ್ಲಿ ಶಿಕ್ಷಣ 12-15% ಮಾತ್ರ ದೇಶದಲ್ಲಿ ಇತ್ತು. 74% ಇವತ್ತು ಸಾಕ್ಷರತೆ ಇದೆ. ಗುಣಮಟ್ಟದ ಶಿಕ್ಷಣ …

Read More »

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ  ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ …

Read More »

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಉಡುಪಿ: ಪೊಲೀಸ್ ಮ್ಯಾರಥಾನ್  ವೇಳೆ ಕುಸಿದು ಬಿದ್ದು ಎಸ್‌ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ  ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್‌ಐ …

Read More »